ಬಡಮಕ್ಕಳ ಮಾನಸಿಕ ಸ್ಥಿತಿ ಏನಾಗಬಹುದು

ಯಾವುದೇ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ. ರಾಜ್ಯ ಸರ್ಕಾರ ಗೊಂದಲದಲ್ಲಿದೆ ಎಂದು ಶಾಸಕ ಯುಟಿ ಖಾದರ್ ಹೇಳಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ತೀರ್ಮಾನ ಜನರನ್ನು ತೊಂದರೆಗೊಳಪಡಿಸುತ್ತಿದೆ.ಶಾಲಾ ಕಾಲೇಜುಗಳ ವಿಚಾರದಲ್ಲಿ ಗೊಂದಲಕಾರಿ ತೀರ್ಮಾನ ತೆಗದುಕೊಳ್ಳತ್ತಿದೆ.ದಿನಕ್ಕೊಂದು ಹೇಳಿಕೆ ನೀಡಿ ಸರ್ಕಾರ ಗೊಂದಲ ಸೃಷ್ಟಿ ಮಾಡತ್ತಿದೆ.ದಯವಿಟ್ಟು ರಾಜ್ಯ ಸರ್ಕಾರ ಸ್ಪಷ್ಟ ಹೇಳಿಕೆ ನೀಡಲಿ. ಸಚಿವರು, ಶಿಕ್ಷಣ ಇಲಾಖೆ ಮಧ್ಯೆ ಸಮನ್ವಯತೆ ಇಲ್ಲ. ಜನಾಭಿಪ್ರಾಯಕ್ಕೆ ರಾಜ್ಯ ಸರ್ಕಾರ ಮನ್ನಣೆ ಕೊಡಬೇಕು. ಒಮ್ಮೆ ಪರೀಕ್ಷೆ ಇದೆ, ಇನ್ನೊಮ್ಮೆ ಪರೀಕ್ಷೆ ಇಲ್ಲ ಎಂದು ಹೇಳಿ ಗೊಂದಲ ಸೃಷ್ಟಿ ಮಾಡಬಾರದು. ಮೊದಲು ಪರೀಕ್ಷೆ ಬಗ್ಗೆ ತೀರ್ಮಾನ ಮಾಡಿ ಆನ್ ಲೈನ್ ಶಿಕ್ಷಣ ಬಗ್ಗೆ ಮಾತಾಡಲಿ. ನಿಗದಿತ ಪರೀಕ್ಷೆಗಳನ್ನು ಸೂಕ್ತ ವ್ಯವಸ್ಥೆ ಮಾಡಿ ಮುಗಿಸಿ. ಆನ್ ಲೈನ್ ಶಿಕ್ಷಣದ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ತೆಗೆದುಕೊಳ್ಳಲಿ. ಮೊಬೈಲ್ ವ್ಯವಸ್ಥೆ ಇಲ್ಲದ ವಿದ್ಯಾರ್ಥಿಗಳು ಹೇಗೆ ಶಿಕ್ಷಣ ಪಡಿಬೇಕು..?. ಆನ್‌ಲೈನ್ ಕಡ್ಡಾಯ ಮಾಡಿದ್ರೆ, ಬಡಮಕ್ಕಳ ಮಾನಸಿಕ ಸ್ಥಿತಿ ಏನಾಗಬಹುದು..? ಎಂದು ಪ್ರಶ್ನಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಎಲ್ಲರಿಗೂ ಅನುಕೂಲ

Sat Jun 13 , 2020
ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿಚಾರವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿ, ತಿದ್ದುಪಡಿ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವುದರಿಂದ ಸಾಕಷ್ಟು ಉಪಯೋಗ ಇದೆ.  ಎಲ್ಲ‌ ರೈತರಿಗೂ ಮತ್ತು ಕೃಷಿ ಬೆಳಗಳಿಗೆ, ತಿದ್ದುಪಡಿ ಕಾಯ್ದೆಯಿಂದ ಅನುಕೂಲ ಆಗಲಿದೆ.  ಇದು ಮುಂದೆ ಸಿದ್ದರಾಮಯ್ಯ ಅವರಿಗೂ ಗೊತ್ತಾಗುತ್ತೆ. ಕಾಯ್ದೆಗೆ ತಿದ್ದುಪಡಿ ತರುತ್ತಿರುವುದನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ನಾನು ಚರ್ಚೆ ಮಾಡ್ತೇನೆ. ತಿದ್ದುಪಡಿ ಬಗ್ಗೆ ಸಿದ್ದರಾಮಯ್ಯ ಅವರಿಗೆ […]

Advertisement

Wordpress Social Share Plugin powered by Ultimatelysocial