ಬಡವರ ಬಂಧು ಫಲಾನುಭವಿಗಳ ದ್ವಿಗುಣಕ್ಕೆ ನಿರ್ಧಾರ

ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಜಾರಿಗೆ ಬಂದಿರುವ ಬಡವರ ಬಂಧು ಯೋಜನೆಗೆ ಬೇಡಿಕೆ ಹೆಚ್ಚಾಗಿದ್ದು ಫಲಾನುಭವಿಗಳನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಫಲಾನುಭವಿಗಳನ್ನು ಗುರುತಿಸುವ ಜವಾಬ್ದಾರಿಯನ್ನು ಸರ್ಕಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲು ಜಿಲ್ಲಾಧಿಕಾರಿಗಳಿಗೆ ವಹಿಸಿದೆ. ಸ್ಥಳೀಯ ವ್ಯಾಪಾರಿಗಳ ಬಡ್ಡಿ ಹಾವಳಿಯಿಂದ ತಪ್ಪಿಸಲು ರಾಜ್ಯ ಸರ್ಕಾರ ನಗರ ಮತ್ತು ಗ್ರಾಮೀಣ ಪ್ರದೇಶದ ಸಣ್ಣ ಬೀದಿ ವ್ಯಾಪಾರಿಗಳಿಗೆ ಡಿಸಿಸಿ ಬ್ಯಾಂಕ್, ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಮಹಿಳಾ ಸಹಕಾರ ಬ್ಯಾಂಕ್‌ಗಳ ಮೂಲಕ ಕಿರು ಸಾಲ ನೀಡುವ ಉದ್ದೇಶದಿಂದ ೨೦೧೮ ರ ನವೆಂಬರ್‌ನಲ್ಲಿ ಯೋಜನೆ ಜಾರಿಗೆ ತರಲಾಗಿತ್ತು. ಈ ಯೋಜನೆಗೆ ಸಾಕಷ್ಟು ಬೇಡಿಕೆ ಇದ್ದರೂ, ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳೀಯ ಆಡಳಿತಗಳಿಂದ ಗುರುತಿನ ಚೀಟಿ ನೀಡದೇ ಇರುವುದರಿಂದ, ಸಾವಿರಾರು ಬೀದಿ ಬದಿ ವ್ಯಾಪಾರಿಗಳು ಈ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಫೀವರ್ ಕ್ಲಿನಿಕ್ ಗಳಲ್ಲಿ ಉಚಿತ ಕೋವಿಡ್ ಟೆಸ್ಟ್

Thu Jul 9 , 2020
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ನಿಯಂತ್ರಣಕ್ಕಾಗಿ ಬಿಬಿಎಂಪಿ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಡಿ ಬರುವ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಫೀವರ್ ಕ್ಲಿನಿಕ್ ತೆರೆಯಲಾಗಿದೆ. ಕ್ಲಿನಿಕ್ ಗಳಲ್ಲಿ ಉಚಿತ ಕೊವಿಡ್ ಪರೀಕ್ಷಾ ಮಾಡಲಾಗುತ್ತದೆ ಎಂದು ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಐಎಲ್‌ಐ ಹಾಗೂ ಎಸ್‌ಎಆರ್‌ಐ ಕಾಯಿಲೆಯಿಂದ ಬಳಲುತ್ತಿರುವವರಿಗೆ ಹಾಗೂ ಕೆಮ್ಮು, ಜ್ವರ, ಶೀತ, ನೆಗಡಿಯಿಂದ ಬಳಲುತ್ತಿವವರಿಗೆ ಉಚಿತ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ಮಾಡಲಾಗುವುದು […]

Advertisement

Wordpress Social Share Plugin powered by Ultimatelysocial