ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಜಾರಿಗೆ ಬಂದಿರುವ ಬಡವರ ಬಂಧು ಯೋಜನೆಗೆ ಬೇಡಿಕೆ ಹೆಚ್ಚಾಗಿದ್ದು ಫಲಾನುಭವಿಗಳನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಫಲಾನುಭವಿಗಳನ್ನು ಗುರುತಿಸುವ ಜವಾಬ್ದಾರಿಯನ್ನು ಸರ್ಕಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲು ಜಿಲ್ಲಾಧಿಕಾರಿಗಳಿಗೆ ವಹಿಸಿದೆ. ಸ್ಥಳೀಯ ವ್ಯಾಪಾರಿಗಳ ಬಡ್ಡಿ ಹಾವಳಿಯಿಂದ ತಪ್ಪಿಸಲು ರಾಜ್ಯ ಸರ್ಕಾರ ನಗರ ಮತ್ತು ಗ್ರಾಮೀಣ ಪ್ರದೇಶದ ಸಣ್ಣ ಬೀದಿ ವ್ಯಾಪಾರಿಗಳಿಗೆ ಡಿಸಿಸಿ ಬ್ಯಾಂಕ್, ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಮಹಿಳಾ ಸಹಕಾರ ಬ್ಯಾಂಕ್ಗಳ ಮೂಲಕ ಕಿರು ಸಾಲ ನೀಡುವ ಉದ್ದೇಶದಿಂದ ೨೦೧೮ ರ ನವೆಂಬರ್ನಲ್ಲಿ ಯೋಜನೆ ಜಾರಿಗೆ ತರಲಾಗಿತ್ತು. ಈ ಯೋಜನೆಗೆ ಸಾಕಷ್ಟು ಬೇಡಿಕೆ ಇದ್ದರೂ, ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳೀಯ ಆಡಳಿತಗಳಿಂದ ಗುರುತಿನ ಚೀಟಿ ನೀಡದೇ ಇರುವುದರಿಂದ, ಸಾವಿರಾರು ಬೀದಿ ಬದಿ ವ್ಯಾಪಾರಿಗಳು ಈ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ.
ಬಡವರ ಬಂಧು ಫಲಾನುಭವಿಗಳ ದ್ವಿಗುಣಕ್ಕೆ ನಿರ್ಧಾರ
Please follow and like us: