ಬಳ್ಳಾರಿಯಲ್ಲಿ ಕೊರೊನಾ ಜೊತೆ ಜೊತೆಗೆ ಸಾವಿನ ಸಂಖ್ಯೆಯು ಹೆಚ್ಚಾಗ್ತಾನೆ ಇದೆ ಆದರು ಸಹ ಬಳ್ಳಾರಿಯನ್ನ ಲಾಕ್ಡೌನ್ ಮಾಡಲ್ಲ ಅಂತ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿವೆ. ಆದ್ರೇ ಇದಕ್ಕೆ ಲಾಕ್ಡೌನ್ ಒಂದೇ ಪರಿಹಾರವಲ್ಲ. ಲಾಕ್ ಡೌನ್ ಮಾಡಿದ್ರೂ ಸೋಂಕಿನ ಪ್ರಕರಣಗಳು ಕಡಿಮೆ ಆಗುತ್ತದೆ ಎಂದು ಹೇಳಲಾಗದು. ಈಗಾಗಲೇ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮಾಡಿರುವ ಲಾಕ್ಡೌನ್ನಿಂದಾಗಿ ಕೊರೋನಾ ನಿಯಂತ್ರಣಕ್ಕೆ ಬರುತ್ತಾ ಎಂಬುದನ್ನು ನೋಡಿಕೊಂಡು ಲಾಕ್ಡೌನ್ ಬಗ್ಗೆ ಯೋಚಿಸುವುದಾಗಿ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಕೊರೊನಾ ಹೆಚ್ಚಳ
Please follow and like us: