ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಅಪರಾಧ

ಬಾಲ ಕಾರ್ಮಿಕ ಪದ್ಧತಿಯಂತಹ ಸಮಾಜ ವಿರೋಧಿ ಆಚರಣೆ ಕುರಿತು ಇರುವ ಕಾನೂನುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸಾರ್ವಜನಿಕರು ಹಾಗೂ ಅಧಿಕಾರಿಗಳು ಒಗ್ಗೂಡಿ ಕಾರ್ಯನಿರ್ವಹಿಸಬೇಕು. 14 ವರ್ಷದೊಳಗಿನ ಯಾವುದೇ ಮಕ್ಕಳನ್ನು, ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ,  ದುಡಿಸಿದಲ್ಲಿ ಅಂತಹವರಿಗೆ  ಕನಿಷ್ಠ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಹಾಗೂ 2 ವರ್ಷದವರೆಗ ಜೈಲು ಶಿಕ್ಷೆ ಮತ್ತು ರೂ. 20 ಸಾವಿರದಿಂದ ರೂ. 50 ಸಾವಿರದವರೆಗೂ ದಂಡ ವಿಧಿಸಲು ಕಾನೂನಿನಲ್ಲಿ‌ ಅವಕಾಶವಿದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಸಂಪೂರ್ಣವಾಗಿ ಹದಿಗೆಟ್ಟು ರಸ್ತೆ 

Fri Jun 12 , 2020
ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಯಿಂದ ಯಲಗಟ್ಟಿವರಿಗೂ ಸಂಪೂರ್ಣವಾಗಿ ಹದಿಗೆಟ್ಟು ಹೋದ ರಸ್ತೆಯ ಬಗ್ಗೆ ಗಮನ ಶಾಸಕರು ಮತ್ತು ಅಧಿಕಾರಿಗಳು ಗಮನ ಹರಿಸಬೇಕು. ಇನ್ನು ರಸ್ತೆಯ ಪಕ್ಕದಲ್ಲಿ ವಿದ್ಯುತ್ ಕಂಬ ಇರೋದ್ರಿಂದ  ಗಾಳಿ ಮಳೆಗೆ ರಸ್ತೆಯ ಮೇಲೆ ವೈರಗಳು ಬಿದ್ದಿದ್ದು, ವಾಹನ ಸವಾರರಿಗೆ  ಭಯದಿಂದ ರಸ್ತೆಯ ಮೇಲೆ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಅತಿಹೆಚ್ಚು ದೇವದುರ್ಗ ತಾಲೂಕಿನ ಜಾಲಹಳ್ಳಿ ಅಕ್ಕ ಪಕ್ಕದ ಗ್ರಾಮ, ಲಿಂಗದಹಳ್ಳಿ ಬಾಗೂರು ಗ್ರಾಮದಲ್ಲಿ ಕೃಷ್ಣ ನದಿಯಿಂದ ಈ […]

Advertisement

Wordpress Social Share Plugin powered by Ultimatelysocial