ಕೊರೊನಾ ಸಂಕಷ್ಟದ ನಡುವೆ ಕರ್ತವ್ಯಕ್ಕೆ ಹಾಜರಾದಂತಹ ೩,೩೯೭ ಬಿಎಂಟಿಸಿ ನೌಕರರಿಗೆ ಬಿಎಂಟಿಸಿ ಆಡಳಿತ ಮಂಡಳಿ ಭರ್ಜರಿ ಉಡುಗೊರೆಯನ್ನ ನೀಡಿದೆ. ಕೊರೋನಾ ಲಾಕ್ ಡೌನ್ ಸಮಯದಲ್ಲಿ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳಿಗೆ ಆಡಳಿತ ಮಂಡಳಿ ಪ್ರತಿ ದಿನಕ್ಕೆ ಹೆಚ್ಚುವರಿಯಾಗಿ ೨೫೦ರೂ ಗಳನ್ನ ನೀಡಲು ನಿರ್ಧರಿಸಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅನುಮತಿ ಪಡೆದು ಬಿಎಂಟಿಸಿ ಅಧ್ಯಕ್ಷ ಎನ್ ಎಸ್ ನಂದೀಶ್ ರೆಡ್ಡಿ, ಎಂ ಡಿ ಶಿಖಾ ಅವರು ಸಭೆಯಲ್ಲಿ ಚರ್ಚಿಸಿ ಅನುಮೋದನೆ ಮೇರೆಗೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.
ಬಿಎಂಟಿಸಿ ನೌಕರರಿಗೆ ಬಂಪರ್ ಗಿಫ್ಟ್
Please follow and like us: