ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿಂದಲೂ ಒಂದಲ್ಲಾ ಒಂದು ಸವಾಲು ಎದುರಾಗುತ್ತಲೇ ಇದೆ. ಆದರೆ, ಈ ವಯಸ್ಸಲ್ಲೂ ಬಿ ಎಸ್ ಯಡಿಯೂರಪ್ಪ ಎಲ್ಲಾ ಸವಾಲುಗಳನ್ನು ಎದುರಿಸಿ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷವಾಗಿದೆ. “ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಯಾವುದೇ ಸವಾಲುಗಳು ಇರಲಿಲ್ಲ. ಆದರೆ, ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗ್ಲೇಲ್ಲಾ ಬರೀ ಸವಾಲುಗಳೇ ಎದುರಾಗಿವೆ. ಪ್ರವಾಹದ ಸಂದರ್ಭದಲ್ಲಿ ಮಂತ್ರಿ ಮಂಡಲ ರಚನೆಯಾಗದೆ ಇದ್ದಾಗ ಒಬ್ರೇ ಓಡಾಡಿ ನೊಂದ ಜನರಿಗೆ ನೆರವಾಗಿದ್ದಾರೆ. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡಲು 5 ಲಕ್ಷ ರೂಪಾಯಿ ನೀಡಿದ್ದರು. ಬೇರೆ ರಾಜ್ಯದ ಸಿಎಂ ಗಳು ಹೊರಗೆ ಬರ್ತಿಲ್ಲ. ಅಂತದ್ದರಲ್ಲಿ ಬಿಎಸ್ ಯಡಿಯೂರಪ್ಪ ಈ ವಯಸ್ಸಲ್ಲೂ ಸಭೆಗಳನ್ನು ಮಾಡಿ ಕೊರೋನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತಿದ್ದಾರೆ” ಎಂದು ಹೇಳಿದರು.
ಬಿಜೆಪಿ ಅಧಿಕಾರಕ್ಕೆ ಬಂದು ಒಂದು ವರ್ಷ
Please follow and like us: