ಯಡಿಯೂರಪ್ಪ ನವರ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೊರೈಸಿದೆ.ಈ ಅವಧಿಯಲ್ಲಿ ಯಡಿಯೂರಪ್ಪ ನವರ ನಾಯಕತ್ವದಲ್ಲಿ ಉತ್ತಮ ಆಡಳಿತ ಮತ್ತು ಜನರ ಕೈ ಹಿಡಿಯುವ ಕೆಲಸ ಮಾಡಿದ್ದೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಹೇಳಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಅನಾವೃಷ್ಠಿ , ಅತಿವೃಷ್ಠಿಯೂ ಆಗಿದೆ.ಉಪ ಚುನಾವಣೆ ನಡೆಯಿತು.
ಈಗ ಕೋವಿಡ್ ಸವಾಲು ಎದುರಿಸುತ್ತಿದ್ದೇವೆ.ಇಂತಹ ಸಂದರ್ಭದಲ್ಲೂ ಹಲವು ಸುಧಾರಣೆ , ಉತ್ತಮ ಕಾರ್ಯಕ್ರಮ ನೀಡಿದ್ದೇವೆ ಎಂದು ಹೇಳಿದ್ದಾರೆ.