ಬಿಜೆಪಿ ನಾಯಕರ ವಾಹನ ಬಂದಾಗ ಬಹಳ ಎಚ್ಚರಿಕೆ, ಜೋಪಾನ; ಕೆಪಿಸಿಸಿ ಅಧ್ಯಕ್ಷ ಡಿ.ಕೆ .ಶಿವಕುಮಾರ್

 

ಬಿಜೆಪಿ ನಾಯಕರ ವಾಹನ ಬಂದಾಗ ಬಹಳ ಎಚ್ಚರಿಕೆ, ಜೋಪಾನ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ .ಶಿವಕುಮಾರ್ ಅವರು ಶುಕ್ರವಾರ ಜನತೆಗೆ ಕಿವಿಮಾತು, ಬುದ್ದಿಮಾತು ಹೇಳಿದ್ದಾರೆ. ಬಿಜೆಪಿ ನಾಯಕರ ಕಾರು ನಿಮ್ಮ ಅಕ್ಕ ಪಕ್ಕದಲ್ಲಿ ಹೋಗುವಾಗ ಮೊಬೈಲ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ಎಂಬುದೇ ತಿಳಿಯುವುದಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವರೊಬ್ಬರ ಪುತ್ರನ ಕಾರು ಹರಿದ ಘಟನೆಯಿಂದ ಆರು ರೈತರು ಮೃತಪಟ್ಟ ಪ್ರಕರಣವನ್ನು ಉಲ್ಲೇಖಿಸಿ ವಿಡಿಯೋ ಬಿಡುಗಡೆ ಮಾಡಿರುವ ಡಿಕೆ ಶಿವಕುಮಾರ್, ಬಿಜೆಪಿ ನಾಯಕರು ಸಾಮಾನ್ಯ ಜನರ ಮೇಲೆ ವಾಹನ ಚಲಾಯಿಸಿದ ದಾಖಲೆ ಹೊಂದಿದ್ದಾರೆ. ಕೇಸರಿ ಪಕ್ಷದ ಕುರಿತು ಜನರು ಜಾಗೃತರಾಗಿರಬೇಕು. ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮೆರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವಿಡಿಯೋ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ ಎಂದು ಹೇಳಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಡ್ರೀಮ್ 11 ಆನ್ ಲೈನ್ ಗೇಮ್ ಇನ್ನುಮುಂದೆ ನೀಷೆಧ:

Fri Oct 8 , 2021
BIG NEWS: ಡ್ರೀಮ್ 11 ಆನ್ ಲೈನ್ ಗೇಮ್ ನಿಷೇಧ; ಆಪ್ ವಿರುದ್ಧ FIR ದಾಖಲು ಬೆಂಗಳೂರು: ಡ್ರೀಮ್ 11 ಆನ್ ಲೈನ್ ಗೇಮ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಬೆಂಗಳೂರಿನ ಅನ್ನಪೂರ್ಣೆಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ರೀಮ್ ಆನ್ ಲೈನ್ ಗೇಮ್ ಅಡಿ ಕೋಟ್ಯಂತರ ರೂಪಾಯಿ ಹಣ ಸಂಪಾದಿಸಬಹುದು ಎಂದು ಸುಳ್ಳು ಭರವಸೆಗಳನ್ನು ನೀಡಿ ವಂಚಿಸಲಾಗುತ್ತಿತ್ತು. ಡ್ರೀಮ್ 11 ಕಂಪನಿಯ ನಿರ್ದೇಶಕ ಭವಿತ್ ಸೇತ್ ಹಾಗೂ ಹರೀಶ್ ಜೈನ್ […]

Advertisement

Wordpress Social Share Plugin powered by Ultimatelysocial