ಬಿಜೆಪಿ ನಾಯಕರು ನೀಡಿರುವ ನೋಟಿಸ್ ಗೆ ನಾನೇನೂ ಹೆದರುವುದಿಲ್ಲ. ನಾನೂ ಒಬ್ಬ ಲಾಯರ್ ತಾನೇ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಆರೋಪಕ್ಕೆ ನೋಟಿಸ್ ನೀಡಿದ ವಿಚಾರದ ಬಗ್ಗೆ ಕಿಡಿಕಾರಿದರು.
ನೋಟಿಸ್ ಬಂಡವಾಳ ಏನು ನನಗೆ ಗೊತ್ತಿಲ್ವಾ? ನಾನೇನು ನೋಟಿಸ್ ಗೆ ಹೆದರಿಕೊಳ್ತಿನಾ? ನಾನು ಆರೋಪ ಮಾಡಿರೋದು ಸರ್ಕಾರದ ಮೇಲೆ. ಅವನ್ಯಾರೋ ನೋಟಿಸ್ ಕೊಟ್ಟಿದ್ದಾನೆ. ಯಾರೋ ನೋಟಿಸ್ ಕೊಟ್ಟರೆ ಏನ್ ಪ್ರಯೋಜನ ಎಂದು ಲೇವಡಿ ಮಾಡಿದರು.