ಬಿಜೆಪಿ ರಾಷ್ಟ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಂದ ಆನ್‌ಲೈನ್ ಸಭೆ

ಬಿಜೆಪಿ  ಅಧ್ಯಕ್ಷ ಜೆ.ಪಿ ನಡ್ಡಾ ಬಿಜೆಪಿ ಪಕ್ಷ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕೆರೆದಿದ್ದಾರೆ. ಕೊರೊನಾ ವೈರಸ್ ನಿಯಂತ್ರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದೆಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ ೫ರಂದು ಅಯೋಧ್ಯಯಲ್ಲಿನ ರಾಮ ಮಂದಿರ ನಿರ್ಮಾಣ ಶಂಕು ಸ್ಥಾಪನೆ ಮಾಡಲಾಗುತ್ತಿದೆ ಈ ವಿಚಾರವನ್ನು ಚರ್ಚೆಯಲ್ಲಿ ಪ್ರಸ್ತಾಪಿಸಲಿದಾರೆ
ಹಾಗೂ ಕೊರೊನಾ ವೈರಸ್ ನಿಯಂತ್ರಣ ಕ್ರಮದ ಕುರಿತು ಹೇಳಲಿದ್ದಾರೆ. ಸೋಂಕು ತಡೆಯುವಲ್ಲಿ ರಾಜ್ಯ ಸರ್ಕಾರಗಳ ಕ್ರಮಗಳು ಮುಂದಿನ ಯೋಜನೆಗಳ ಕುರಿತು ಚರ್ಚೆಯಲ್ಲಿ ಮಾಹಿತಿ ಸಂಗ್ರಹಿಸುವ ಸಾಧ್ಯತೆ ಇದೆ.

Please follow and like us:

Leave a Reply

Your email address will not be published. Required fields are marked *

Next Post

ನೆಹರು ಹೆಸರು ಕೈಬಿಟ್ಟ ಉತ್ತರ ಪ್ರದೇಶ ಸರ್ಕಾರ

Tue Jul 28 , 2020
ದಿವಂಗತ ಮಾಜಿ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಾಹರಲಾಲ್ ನೆಹರು ಮತ್ತು ಲಾಲ್ ಬಹದ್ದೂರ್ ಶಾಸ್ತಿ ಯವರ ಇತಿಹಾಸಕ್ಕೆ ಸಂಬoಧಿಸಿದ ಭಾಗಗಳನ್ನು ಉತ್ತರಪ್ರದೇಶ ಶಿಕ್ಷಣ ಇಲಾಖೆ ೧೨ನೇ ತರಗತಿ ಪಠ್ಯಕ್ರಮದಿಂದ ಕೈಬಿಟ್ಟಿದೆ. ರಾಜ್ಯ ಕಾಂಗ್ರೆಸ್ ಘಟಕ ಉತ್ತರಪ್ರದೇಶ ಬಿಜೆಪಿ ಸರ್ಕಾರದ ಈ ಕ್ರಮವನ್ನು ವಿರೋಧಿಸಿದ್ದು ರಾಜ್ಯಾದ್ಯಂತ ಆಂದೋಲನಕ್ಕೆ ಕರೆ ನೀಡುವುದಾಗಿ ಬೆದರಿಕೆ ಒಡ್ಡಿದೆ. ಬಿಜೆಪಿ ಪಕ್ಷದ ಈ ನಡೆಯನ್ನು ಪಿತೂರಿ ಎಂದು ಕರೆದಿರುವ ಲಾಲ್ ಬಹದ್ದೂರ್ ಶಾಸ್ತಿ ಅವರ ಪುತ್ರ ಕಾಂಗ್ರೆಸ್ […]

Advertisement

Wordpress Social Share Plugin powered by Ultimatelysocial