ಬಿಜೆಪಿ ಸರ್ಕಾರದ ವಿರುದ್ಧ ಟಗರು ಕಿಡಿ..!

ರೈತರ ಮೇಲೆ ಸಚಿವರ ಮಗನ ಕಾರು ಹರಿದು, ರೈತರು ಮೃತಪಟ್ಟಿರುವ ಪ್ರಕರಣ ಬಿಜೆಪಿ ಕೊಲೆಗಡುಕ ಮನಸ್ಸಿಗೆ ಸಾಕ್ಷಿ. ರೈತರನ್ನು ಶತ್ರುಗಳೆಂದು ತಿಳಿದಿರುವ ಬಿಜೆಪಿ ಸರ್ಕಾರ ಅವರನ್ನು ಪೊಲೀಸರ ಮೂಲಕ ದಮನಿಸಲು ಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ಮಾಡಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಗೂಂಡಾ ರಾಜ್ಯದಲ್ಲಿ ರೈತರು, ಮಹಿಳೆಯರು, ಬಡವರು, ದಲಿತರ ಮಾನಪ್ರಾಣ ಯಾವುದೂ ಸುರಕ್ಷಿತವಲ್ಲ. ಸಂವಿಧಾನವೇ ಕುಸಿದು ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಅಲ್ಲಿನ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಪ್ರತಿರೋಧಭಿನ್ನಾಭಿಪ್ರಾಯವನ್ನು ಸಹಿಸದ ಕೇಂದ್ರದ ಬಿಜೆಪಿ ಸರ್ಕಾರ ತನ್ನ ತಾಲಿಬಾನಿ ಮನಸ್ಥಿತಿಯನ್ನು ಬಹಿರಂಗಪಡಿಸುತ್ತಿದೆ. ರೈತರ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಿರುವ ಯೋಗಿ ಆದಿತ್ಯನಾಥ್ ಸರ್ಕಾರದ ಕೃತ್ಯ ಖಂಡನೀಯ ಎಂದು ಕಿಡಿಕಾರಿದ್ದಾರೆ

 

Please follow and like us:

Leave a Reply

Your email address will not be published. Required fields are marked *

Next Post

ಇಂಟಿಗ್ರೇಟೆಡ್ ರಸ್ತೆ ಮೇಲ್ಸೇತುವೆ ಲೋಕಾರ್ಪಣೆ ಮಾಡಿದ ಸಿಎಂ...!

Mon Oct 4 , 2021
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿವನಹಳ್ಳಿ ಬಳಿ ನಿರ್ಮಿಸಲಾಗಿರುವ ಇಂಟಿಗ್ರೇಟೆಡ್ ರಸ್ತೆ ಮೇಲ್ಸೇತುವೆಯನ್ನು ಇಂದು ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಹಸುವಿಗೆ ಮುಖ್ಯಮಂತ್ರಿಗಳು ವಿಶೇಷ ಪೂಜೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ವಿ ಸೋಮಣ್ಣ , ಶಾಸಕ ಸುರೇಶ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು. ಸಚಿವ ಕೆ. ಗೋಪಾಲಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.   Please follow and like us:

Related posts

Advertisement

Wordpress Social Share Plugin powered by Ultimatelysocial