ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಸರ್ಕಾರಿ ಅಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರುಗಳು ಒಂದು ತಿಂಗಳೊಳಗಾಗಿ ಹಿಂದಿರುಗಿಸಬೇಕು, ಇಲ್ಲದಿದ್ದರೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ ಅಥವಾ ದೂರು ಸ್ವೀಕೃತವಾದರೆ ಅಂತಹ ಸರ್ಕಾರಿ ಅಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ಹೂಡುವುದಲ್ಲದೇ ಅದರ ಜೊತೆಗೆ ಸರ್ಕಾರಕ್ಕೆ ಅವರಿಂದ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಎಚ್ಚರಿಕೆಯನ್ನು ನೀಡಿದ್ದಾರೆ. ಅದಲ್ಲದೇ ಒಬ್ಬ ಸರ್ಕಾರಿ ನೌಕರನಿಗೆ ಇದು ತರವಲ್ಲದ ವರ್ತನೆಯಾಗಿದೆ. ಬಡವರಿಗೆ ಮಾತ್ರ ನೀಡಬೇಕಾದ ಬಿಪಿಎಲ್ ಕಾರ್ಡ್ ನನ್ನು , ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.