ಬಿ.ಎಲ್ ಸಂತೋಷ್ ವಿರುದ್ಧ ಸಿದ್ದರಾಮಯ್ಯ ಕಿಡಿ

 

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಗಡಿಯಲ್ಲಿ ಚೀನಾ ಸೇನೆಯಲ್ಲಿ ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್ ಸಂತೋಷ್ ರಕ್ಷಣಾ ಸಚಿವರೇ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಆರ್‌ಎಸ್‌ಎಸ್ ನಾಯಕ ಬಿ.ಎಲ್.ಸಂತೋಷ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ್ದ ಅಧಿಕಾರಿಗಳ ಸಭೆಯ ವಿವರವೂ ಸೇರಿದಂತೆ ನಿಮ್ಮ ಸರ್ಕಾರಕ್ಕೆ ಬುದ್ದಿ ಹೇಳಿ ತಿದ್ದಲು ಏನೆಲ್ಲ ಮಾಡಿದ್ದೇನೆ ಎಂಬ ವಿವರ ನೀಡುವೆ. ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಬಿ.ಎಲ್.ಸಂತೋಷ್ ಕೇಳಿದ್ದಾರೆ, ಅದನ್ನು ಕೊಡೋಣ. ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ನರೇಂದ್ರ ಮೋದಿ ಜಮೆ ಮಾಡಿರುವ ೧೫ ಲಕ್ಷ ರೂಪಾಯಿಯ ಲೆಕ್ಕ ಕೊಡಿ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಕಲ್ಲಿದ್ದಲು ಉತ್ಪಾದನೆ ಹೆಚ್ಚಿಸಲು ವಾಣಿಜ್ಯೀಕರಣ- ಸಚಿವ ಪ್ರಲ್ಹಾದ ಜೋಶಿ

Tue Jul 7 , 2020
ಆಮದು ಪ್ರಮಾಣ ಕಡಿಮೆ ಮಾಡಿ ದೇಶದಲ್ಲಿಯೇ ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಕಲ್ಲಿದ್ದಲು ಗಣಿಗಾರಿಕೆಯನ್ನು ವಾಣಿಜ್ಯೀಕರಣ ಮಾಡಲಾಗುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ‘ಸದ್ಯಕ್ಕೆ ೩೦ ದಿನಗಳಿಗಾಗುವಷ್ಟು ಬೇಕಾಗುವ ಕಲ್ಲಿದ್ದಲು ನಮ್ಮಲ್ಲಿ ಸಂಗ್ರಹವಿದೆ. ೨೦೨೩ ಅಥವಾ ೨೦೨೪ರ ವೇಳೆಗೆ ಭಾರತಕ್ಕೆ ಬೇಕಾಗುವ ೧,೦೦೦ರಿಂದ ೧,೧೦೦ ಮಿಲಿಯನ್ ಟನ್ ಕಲ್ಲಿದ್ದಲನ್ನು ನಮ್ಮಲ್ಲಿಯೇ ಉತ್ಪಾದಿಸುವಂತೆ ಕೋಲ್ ಇಂಡಿಯಾ ಕಂಪನಿಗೆ ಸೂಚಿಸಲಾಗಿದೆ. ಈ ಕಂಪನಿ ವರ್ಷದ ಇಲ್ಲಿಯ ತನಕ ೬೦೬ […]

Advertisement

Wordpress Social Share Plugin powered by Ultimatelysocial