ಬೀದರ್‌ನ ಎರಡು ಸಕ್ಕರೆ ಖಾರ್ಕಾನೆಗಳಿಗೆ ನೋಟಿಸ್

ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ ಮಾಡಲಾಗಿದೆ. ರೈತರಿಗೆ ಕಬ್ಬಿನ ಬಾಕಿ ಪಾವತಿಸದೆ ಇರುವುದು ನೋಟಿಸ್ ಜಾರಿ ಮಾಡಲಾಗಿದೆ ಎಂದು ಹೇಳಲಾಗ್ತಾಯಿದೆ. ಕಳೆದ ೨೦೧೯-೨೦ ಸಾಲಿಗೆ ಸಕ್ಕರೆ ಕಾರ್ಖಾನೆಗಳಿಗೆ ರೈತರು ತಾವು ಬೆಳೆದ ಕಬ್ಬುಗಳನ್ನು ಪೂರೈಸಿದ್ದರು. ಆದರೆ, ರೈತರಿಗೆ ಕಬ್ಬಿನ ಬಾಕಿ ಹಣ ನೀಡಿರಲಿಲ್ಲ. ಹಣ ಪಾವತಿಸದ ಹಿನ್ನಲೆ ಜಿಲ್ಲೆಯ ಎರಡೂ ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ ಮಾಡಿದೆ. ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಇಮಾಮಪೂರ್ ೪೮೪.೭೫ ಲಕ್ಷ ಬಾಕಿ ಇದ್ದರೆ. ಬೀದರ್ ಕಿಸಾನ ಸಹಕಾರ ಸಕ್ಕರೆ ಕಾರ್ಖಾನೆ ಮೊಗದಾಳ ೭೪೬.೭೫ ಲಕ್ಷ ಬಾಕಿ ಉಳಿಸಿಕೊಂಡಿದೆ. ಎರಡು ಸಕ್ಕರೆ ಕಾರ್ಖಾನೆಗಳಿಗೆ ಹಲವು ಬಾರಿ ಸಭೆಯಲ್ಲಿ ಸೂಚಿಸಿದ್ದರು ಬಾಕಿ ಪಾವತಿಸದ ಹಿನ್ನಲೆಯಲ್ಲಿ ನೋಟಿಸ್ ಜಾರಿಯಾಗಿದೆ. ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ೧೫ ದಿವಸಗಳಲ್ಲಿ ಹಣ ಪಾವತಿಸುವಂತೆ ಸೂಚನೆ ನೀಡಿದ್ದಾರೆ. ೧೯೬೪ ರ ಕಲಂ ೧೯೦ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿ ಮೋದಿ ಲಡಾಖ್ ಗೆ ಧೀಢಿರ್ ಭೇಟಿ

Fri Jul 3 , 2020
ಭಾರತ-ಚೀನಾ ಗಡಿ ಬಿಕ್ಕಟ್ಟು ಸಂಘರ್ಷದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲಡಾಖ್ ನ ಲೇಹ್ ಗೆ ಭೇಟಿ ನೀಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆಯೇ ಲಡಾಕ್ ಗೆ ತಲುಪಿದ್ದು, ಸೇನಾ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಜೊತೆಗೆ ಗಡಿಯಲ್ಲಿನ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ಜೂನ್ ೧೫ ರ ರಾತ್ರಿ ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಬಳಿಕ ಇಂದು ಲಡಾಖ್ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ […]

Advertisement

Wordpress Social Share Plugin powered by Ultimatelysocial