ಬೀದರ್ ನ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ನಿರ್ವಹಣೆಯು ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಸಚಿವ ಪ್ರಭು ಚವ್ಹಾಣ್ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ವೈದ್ಯರು, ಆಡಳಿತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಾಹಿತಿ ಪಡೆದರು. ಸಭೆಯಲ್ಲಿ ಡಾ.ವಿಶ್ವನಾಥ ನಿಂಬೂರೆ, ಡಾ.ಸಿ.ಆನಂದರಾವ್, ಡಾ.ಚಂದ್ರಕಾಂತ ಗುದಗೆ, ಡಾ.ರಜನೀಶ ವಾಲಿ ಸೇರಿದಂತೆ ಹಲವಾರು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ಆಡಳಿತ ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಜರಿದ್ದರು. ಸಭೆಯಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡಿದ ಸಚಿವರು, ಕೊರೊನಾ ನಿರ್ವಹಣೆಗೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಒದಗಿಸಲೇಬೇಕು ಎಂದು ತಮ್ಮಲ್ಲಿ ಬೀದರ್ ಮಹಾಜನತೆಯ ಪರವಾಗಿ ಮನವಿ ಮಾಡುತ್ತೇನೆ ಎಂದರು. ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಡ್ಡಾಯ ಆದೇಶವಿದ್ದು ಇದನ್ನು ಎಲ್ಲರೂ ಪಾಲನೆ ಮಾಡಬೇಕು ಎಂದರು. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಮಹಾಮಾರಿ ತಡೆಗೆ ತಮ್ಮ ಸಹಕಾರ ಬೇಕೇ ಬೇಕು. ರಾಜ್ಯ ಸರ್ಕಾರ ತಮ್ಮ ಜೊತೆಗೆ ಇರುತ್ತದೆ, ತಾವುಗಳು ಸಹಾಯ ಮಾಡಲೇಬೇಕು ಇಲ್ಲವಾದಲ್ಲಿ ನಾನು ಬಿಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಬೀದರ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದ್ಲಲಿ ತುರ್ತು ಸಭೆ
Please follow and like us: