ಬೀದರ್ ಜಿಲ್ಲೆಯಲ್ಲಿ ಸರಗಳ್ಳತನ

ಸರಗಳ್ಳತನ ಮಾಡುತ್ತಿದ್ದ ಇರಾನಿ ಕಾಲೋನಿಯ ಖದೀಮರನ್ನು ಬಂಧಿಸುವಲ್ಲಿ ಸಂತಪೂರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ೧.೨೦ ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ, ಎರಡು ಬೈಕ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮಹಮ್ಮದ ಅಲಿ, ಜಾಫರ್ ಆಜಮ್, ಗುಲಾಮ್ ರಸೂಲ್, ಹಸನ್ ನಯನ್, ಫರಿದಾ(ಮಸ್ಕಾನ್, ಸಕೀನಾ) ಅಲಿ, ನೀತು, ಸೇಲ್ವಾನಿ ಬೇಗಂ ಹಾಗೂ ಸಬಿಗುಲ್ ಬಂದಿತ ಆರೋಪಿಗಳು ಎಂದು ತಿಳಿದು ಬಂದಿದೆ. ಸರ‍್ವಜನಿಕ ಸ್ಥಳಗಳಲ್ಲಿ ಸಂಚರಿಸುತ್ತಿದ್ದ ಮಹಿಳೆಯರ ಮೈಮೇಲಿನ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗುತ್ತಿದ್ದ, ಪಲ್ಸರ್ ಬೈಕ್ ಚೋರರ ಹೆಡೆಮುರಿ ಕಟ್ಟುವಲ್ಲಿ ಬೀದರ್ ಜಿಲ್ಲೆಯ ಸಂತಪೂರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ೧.೨೦ ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ, ಎರಡು ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬಂಗಾರಪೇಟೆ ಒಂದು ವಾರ ಲಾಕ್ ಡೌನ್

Thu Jul 16 , 2020
ಒಂದು ವಾರಗಳ ಕಾಲ ಪಟ್ಟಣವನ್ನ ಕಂಪ್ಲೀಟ್ ಲಾಕ್‌ಡೌನ್ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಎಸ್ ಎನ್ ನಾರಾಯಣ ಸ್ವಾಮಿ ಹೇಳಿದ್ದಾರೆ. ಬಂಗಾರಪೇಟೆಯಲ್ಲಿ ಮತನಾಡಿದ ಅವರು, ತಾಲೂಕಿನಲ್ಲಿ ಈಗಾಗಲೇ ಕೊರೊನಾ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ, ಇದುವರೆಗೂ ತಾಲೂಕಿನಲ್ಲಿ ೪ ಕೋವಿಡ್ ಸೋಕಿನ ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಇನ್ನೂ ಅಲವು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಉಳಿದ ಪ್ರಕರಣಗಳ ವರದಿ ಬರಬೇಕಿದೆ. ತಾಲೂಕಿನ ಆಡಳಿತ ಮಂಡಳಿ ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರವನ್ನು […]

Advertisement

Wordpress Social Share Plugin powered by Ultimatelysocial