ಬೀದಿ ಬದಿ ವ್ಯಾಪಾರಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ 10 ಸಾವಿರ ರೂ. ಸಾಲ ನೀಡಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ತುಮಕೂರನಲ್ಲಿ ಮಾತನಾಡಿದ ಅವರು, ಶ್ರಮಿಕರು, ಅತಿ ಸಣ್ಣ ವ್ಯಾಪಾರಿಗಳು ಸ್ವಸಹಾಯ ಗುಂಪುಗಳಿಗೆ ಆರ್ಥಿಕ ನೆರವು ನೀಡಲಾಗುವುದು. ಬೀದಿಬದಿ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ 10 ಸಾವಿರ ರೂ. ನೀಡಲಿದ್ದು, ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ಹೇಳಿದ್ದಾರೆ. ಸಣ್ಣ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ ಆರ್ಥಿಕ ನೆರವು ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶ್ರಮಿಕರು ಪಡೆದ ಸಾಲವನ್ನು ನೂರಕ್ಕೆ ನೂರರಷ್ಟು ವಾಪಸ್ ಮಾಡುವ ವಿಶ್ವಾಸದಿಂದ ಬಡವರ ಬಂಧು ಯೋಜನೆಯಡಿ ಅವರಿಗೆ ಸಾಲ ವಿತರಿಸಲು ಒತ್ತು ನೀಡಬೇಕೆಂದು ಅಪೆಕ್ಸ್ ಮತ್ತು ಡಿಸಿಸಿ ಬ್ಯಾಂಕ್ ಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿಸುದ್ದಿ
Please follow and like us: