ಬೆಂಗಳೂರಿಗರೇ ಚಿಂತೆ ಬಿಡಿ

ಇನ್ಮುಂದೆ ಬೆಂಗಳೂರಿಗರು ಚಿಂತಿಸುವ ಅಗತ್ಯವಿಲ್ಲ ಪ್ರತೀ ಎರಡು ವಾರ್ಡ್ ಗಳಿಗೆ ಒಂದೊಂದು ಆ್ಯಂಬುಲೆನ್ಸ್ ಗಳನ್ನು ಮೀಸಲಿಡಲಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ದಿನಕಳೆದಂತೆ ಕೊರೋನಾ ಆರ್ಭಟ ಹೆಚ್ಚಾಗಿದ್ದು, ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಸಿಗದೇ ರೋಗಿಗಳು ಪರದಾಡುತ್ತಿರುವ ಸುದ್ದಿಗಳ ನಡುವೆಯೇ ಕಂದಾಯ ಸಚಿವ ಈ ಸಂಬಂಧ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಕೋವಿಡ್‌ ದೃಢಪಟ್ಟ ರೋಗಿಗಳು ಕಾಯುವ ಸ್ಥಿತಿ ಬರಬಾರದೆಂದು ಹೇಳಿದ್ದಾರೆ. ಹಾಗೂ ತಪಾಸಣಾ ವರದಿ ಬಂದ 6–8 ಗಂಟೆ ಒಳಗೆ ಚಿಕಿತ್ಸಾ ಕೇಂದ್ರಕ್ಕೆ ತಲುಪಿಸಲು ಅಗತ್ಯವಾದ ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ. ಅಲ್ಲದೇ ಸೋಂಕು ದೃಢಪಟ್ಟರೆ ಅಂಥಹವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಸದ್ಯ 100 ಆಂಬುಲೆನ್ಸ್‌ಗಳು ಲಭ್ಯವಿವೆ. ಎರಡು ವಾರ್ಡ್‌ಗಳಿಗೆ ಒಂದು ಆಂಬುಲೆನ್ಸ್‌ ಸಿಗುವಂತೆ ವ್ಯವಸ್ಥೆ ಮಾಡಿದ್ದೇವೆ. ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಆಂಬುಲೆನ್ಸ್‌ಗಳನ್ನು ಈ ಉದ್ದೇಶಕ್ಕೆ ಬಳಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

 

 

Please follow and like us:

Leave a Reply

Your email address will not be published. Required fields are marked *

Next Post

ಶುರುವಾಯ್ತು ರೋರಿಂಗ್ ಸ್ಟಾರ್‌ನ ಮದಗಜ....!

Fri Jun 26 , 2020
ಸುದ್ದಿಮುಲಗಳ ಪ್ರಕಾರ ಕನ್ನಡದ ಮದಗಜ ಚಿತ್ರದಲ್ಲಿ ತಮಿಳಿನ ವಿಜಯ್ ಸೇತುಪತಿ ಅಥವಾ ತೆಲುಗಿನ ಜಗಪತಿ ಬಾಬು ವಿಲನ್ ಆಗಿ ಆಭಿನಯಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಈಸಿನಿಮಾದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಮತ್ತು ಆಶಿಕಾ ರಂಗನಾಥ್ ಅಭಿನಯಿಸಲಿದ್ದಾರೆ .ಹಾಗೂ ಈ ಸಿನಿಮಾ ಪರಭಾಷೆಗಳಲ್ಲಿಯೂ ಸಹ ಬಿಡುಗಡೆಯಾಗಲಿದೆ. ಜುಲೈ೧೩ ರಂದ ಚಿತ್ರಿಕರಣ ಪ್ರಾರಂಭವಾಗಲಿದೆ. ಕೆಜಿಎಫ್ ಸಿನಿಮಾ ಖ್ಯಾತಿಯ ಚಂದ್ರಮೌಳಿ ಮತ್ತು ಶಂಕರ್ ಡೈಲಾಗ್ ಬರೆದಿದ್ದಾರೆ. ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದಾರೆ. ಒಟ್ಟಾರೆಯಾಗಿ ಶ್ರೀಮುರಳಿ ಅಭಿಮಾನಿಗಳಿ […]

Advertisement

Wordpress Social Share Plugin powered by Ultimatelysocial