ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಸಾಧ್ಯವೇ ಇಲ್ಲ ಎಂದು ಕಂದಾಯ ಸಚಿವ ಆರ್.ಆಶೋಕ್ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವ ಕಾರಣಕ್ಕೂ ಬೆಂಗಳೂರಿನಲ್ಲಿ ಲಾಕ್ ಡೌನ್ ಪ್ರಸ್ತಾವನೆಯೇ ಇಲ್ಲ. ಕೊರೊನಾ ಜತೆಯೆ ನಾವು ಬದುಕಬೇಕಿದೆ, ಕೊರೊನಾ ನಡುವೆ ಅಭಿವೃದ್ಧಿ ಕರ್ಯ ನಡೆಯಬೇಕಿದೆ. ಜನರು ಆತಂಕ ಪಡಬೇಕಿಲ್ಲ. ಸೀಲ್ ಡೌನ್ ವ್ಯಾಪ್ತಿಯನ್ನು ಹೆಚ್ಚಿಸಲಾಗುವುದು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಸೋಂಕು ಪೀಡಿತರ ಪ್ರಮಾಣ ಕಡಿಮೆಯಿದೆ. ಹೊರರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್ ಮಾಡಲಾಗುತ್ತದೆ. ಹೋಟೆಲ್,ಕಲ್ಯಾಣ ಮಂಟಪಗಳಲ್ಲಿ ಕ್ವಾರಂಟೈನ್ ವ್ವವಸ್ಥೆಯನ್ನು ಮಾಡಲಾಗುತ್ತದೆ,ಇನ್ಮುಂದೆ ಪ್ರತಿದಿನ ೭ ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ಮತ್ತೆ ಲಾಕ್ಡೌನ್ ಸಾಧ್ಯವಿಲ್ಲ…
Please follow and like us: