ಬೆಂಗಳೂರಿನಿಂದ ಬರುವ ವ್ಯಕ್ತಿಗಳ ಬಗ್ಗೆ ಮುನ್ನೆಚ್ಚರ

ಬೆಂಗಳೂರು ಹಾಗೂ ಹೊರ ರಾಜ್ಯದಿಂದ ದಾವಣಗೆರೆಗೆ ಬರುವ ವ್ಯಕ್ತಿಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಒಂದು ದಿನಕ್ಕೆ ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ, ಬೆಂಗಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಬರುವವರ ಬಗ್ಗೆ ಆತಂಕ ಹೆಚ್ಚಾಗಿದೆ ಎಂದಿದ್ದಾರೆ. ಹಾಗೂ ಈ ಬಗ್ಗೆ ಪ್ರತಿಯೊಂದು ಹಳ್ಳಿಯಲ್ಲಿ ಡಂಗುರ ಸಾರಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ. ದಾವಣಗೆರೆಗೆ ಬೆಂಗಳೂರು ಹಾಗೂ ಹೊರ ರಾಜ್ಯದ ವ್ಯಕ್ತಿಗಳು ಬಂದರೆ, ಅವರಲ್ಲಿ ರೋಗ ಲಕ್ಷಣಗಳು ಕಂಡು ಬಂದರೆ, ತಾಲೂಕು ಆಸ್ಪತ್ರೆಗಳಿಗೆ ತಿಳಿಸಬೇಕಿದೆ. ಕೊರೊನಾ ಪ್ರಕರಣಗಳು ಬೆಂಗಳೂರಿನಲ್ಲಿ ಹೆಚ್ಚಾಗಿದ್ದು, ಸಾಕಷ್ಟು ಮಂದಿ ಬೆಂಗಳೂರಿನಿಂದ ತಮ್ಮ ತಮ್ಮ ಊರಿಗೆ ಮರಳುತ್ತಿದ್ದಾರೆ. ಹೀಗಾಗಿ, ಬೆಂಗಳೂರಿನಿಂದ ಬರುವವರಿಗೆ ಸೋಂಕಿನ ಲಕ್ಷಣಗಳು ಇದ್ದರೆ, ಜಿಲ್ಲೆಯಲ್ಲಿ ಮತ್ತಷ್ಟು ಜನರಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ, ಎಲ್ಲಾ ತಹಶಿಲ್ದಾರ್ ಗಳಿಗೆ ಪತ್ರದ ಮೂಲಕ ಡಿಸಿ ಬೀಳಗಿ ಸೂಚನೆ ನೀಡಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ವಿಜಯಪುರಕ್ಕೆ ವಿಮಾನ ನಿಲ್ದಾಣ

Thu Jul 9 , 2020
ವಿಜಯಪುರದ ಬುರನಾಪುರ,ಮಾಧುಭಾವಿ ಗ್ರಾಮಗಳ ಸಮೀಪ 220 ಕೋಟಿ ವೆಚ್ಚದಲ್ಲಿ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ನಿರ್ಮಾಣಗೊಳ್ಳಲಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಲೋಕೋಪಯೋಗಿ ಇಲಾಖೆಯ ಮೂಲಕ ಕಾಮಗಾರಿ ನಡೆಸಲಾಗುವುದು. ಮೊದಲ ಹಂತದಲ್ಲಿ  95 ಕೋಟಿ ವೆಚ್ಚದಲ್ಲಿ ರನ್‌ವೇ, ಟ್ಯಾಕ್ಸಿವೇ, ಅಪ್ರೊನ್‌, ಪಾರ್ಕಿಂಗ್ ಪ್ರದೇಶ, ಟರ್ಮಿನಲ್ ಕಟ್ಟಡ ಸಹಿತ ಅಗತ್ಯ ಕೆಲಸ ನಡೆಯಲಿದೆ ಎಂದು ತಿಳಿಸಿದ್ದಾರೆ.‌ ಎರಡನೇ […]

Advertisement

Wordpress Social Share Plugin powered by Ultimatelysocial