ರಾಜ್ಯದಲ್ಲಿ ಮಹಾಮಾರಿ ಕೋವಿಡ್ ೧೯ ಪ್ರಕರಣಗಳ ಸ್ಫೋಟ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತಿಕೊಂಡು ಪ್ರತಿ ಭಾನುವಾರ ಲಾಕ್ಡೌನ್ ಘೋಷಣೆ ಮಾಡಿದ್ದು, ನಗರದಾದ್ಯಂತ ಲಾಕ್ಡೌನ್ಗೆ ಉತ್ತಮ ಬೆಂಬಲ ವ್ಯಕ್ತವಾಗಿತ್ತು. ಹಾಗಾಗಿ ಲಾಕ್ಡೌನ್ಗೆ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರು ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ “ನೀವೆಲ್ಲಾ ೩೬ ಗಂಟೆಗಳ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದೀರ. ನಿಮಗೆಲ್ಲಾ ಹೃತ್ಪೂರ್ವಕ ಧನ್ಯವಾದಗಳು. ಇನ್ನು ಮುಂದೆ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡೋಣ ಎಂದು ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ. ನಿಮಗೆ ಯಾವುದೇ ರೀತಿಯ ಸಮಸ್ಯೆಯಾದರೂ ೧೦೦ಕ್ಕೆ ಕರೆ ಮಾಡಿ. ತಕ್ಷಣ ಹೊಯ್ಸಳ ಸಿಬ್ಬಂದಿಗೆ ಸ್ಪಂದಿಸುವAತೆ ನಾನು ತಿಳಿಸಿದ್ದೇನೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.
ಬೆಂಗಳೂರು ಜನತೆಗೆ ಧನ್ಯವಾದ
Please follow and like us: