ಬೆಂಗಳೂರು ಜನತೆಗೆ ಧನ್ಯವಾದ

ರಾಜ್ಯದಲ್ಲಿ ಮಹಾಮಾರಿ ಕೋವಿಡ್ ೧೯ ಪ್ರಕರಣಗಳ ಸ್ಫೋಟ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತಿಕೊಂಡು ಪ್ರತಿ ಭಾನುವಾರ ಲಾಕ್‌ಡೌನ್ ಘೋಷಣೆ ಮಾಡಿದ್ದು, ನಗರದಾದ್ಯಂತ ಲಾಕ್‌ಡೌನ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿತ್ತು. ಹಾಗಾಗಿ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರು ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ “ನೀವೆಲ್ಲಾ ೩೬ ಗಂಟೆಗಳ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದೀರ. ನಿಮಗೆಲ್ಲಾ ಹೃತ್ಪೂರ್ವಕ ಧನ್ಯವಾದಗಳು. ಇನ್ನು ಮುಂದೆ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡೋಣ ಎಂದು ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ. ನಿಮಗೆ ಯಾವುದೇ ರೀತಿಯ ಸಮಸ್ಯೆಯಾದರೂ ೧೦೦ಕ್ಕೆ ಕರೆ ಮಾಡಿ. ತಕ್ಷಣ ಹೊಯ್ಸಳ ಸಿಬ್ಬಂದಿಗೆ ಸ್ಪಂದಿಸುವAತೆ ನಾನು ತಿಳಿಸಿದ್ದೇನೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಡೆಲಾಯ್ಟ್ ಸೆಲ್ಸ್ ಸಂಸ್ಥೆ ಹೇಳಿಕೆ

Mon Jul 6 , 2020
ಕೇಂದ್ರಸರ್ಕಾರ ಅಧೀನದ ದೂರಸಂಪರ್ಕ ಸಂಸ್ಥೆಗಳಾದ ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ ಅನ್ನು ವಿಲೀನಗೊಳಿಸುವ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗಲಿದೆ. ತಕ್ಷಣಕ್ಕೆ ಈ ವಿಲೀನ ಕಾರ್ಯಸಾಧುವಲ್ಲ ಎಂದು ಸರ್ಕಾರವೇ ನೇಮಿಸಿದ ಡೆಲಾಯ್ಟ್ ಆ್ಯಂಡ್ ಎಲ್‌ಎಲ್‌ಪಿ ಸೆಲ್ಸ್ ಸಂಸ್ಥೆ ಸಲಹೆ ನೀಡಿದ್ದೇ ಇದಕ್ಕೆ ಕಾರಣ. ಸದ್ಯ ಬಿಎಸ್ ಎನ್‌ಎಲ್, ದೆಹಲಿ ಮತ್ತು ಮುಂಬೈ ಹೊರತುಪಡಿಸಿ, ದೇಶದ ಉಳಿದೆಲ್ಲೆಡೆ ತನ್ನ ಸೇವೆ ಹೊಂದಿದೆ. ಎಂಟಿಎನ್‌ಎಲ್ ದೆಹಲಿ-ಮುಂಬೈನಲ್ಲಿ ಮಾತ್ರ ಕಾರ್ಯಾಚರಿಸುತ್ತಿದೆ. ಈ ಎರಡು ಸಂಸ್ಥೆಗಳನ್ನು ವಿಲೀನ ಮಾಡುವುದಕ್ಕೆ ಮುನ್ನ […]

Advertisement

Wordpress Social Share Plugin powered by Ultimatelysocial