ಭಾರಿ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೊನೆಗೂ ಜಲಸಂಪನ್ಮೂಲ ಖಾತೆ ಮಂತ್ರಿ ರಮೇಶ್ ಜಾರಕಿಹೊಳಿ ಪಾಲಾಗಿದೆ. ಹಾಸನ ಜಿಲ್ಲಾ ಉಸ್ತುವಾರಿಯನ್ನು ಕೆ. ಗೋಪಾಲಯ್ಯ ಅವರಿಗೆ ನೀಡಲಾಗಿದೆ.
ಇಲ್ಲಿಯವರೆಗೆ ಜಗದೀಶ್ ಶೆಟ್ಟರ್ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಈಗ ಆ ಸ್ಥಾನಕ್ಕೆ ಜಾರಕಿಹೊಳಿ ಬಂದಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಜಿಲ್ಲೆಯಲ್ಲಿ ನಾಲ್ಕು ಜನ ಸಚಿವರಿದ್ದರೂ ಹೊರ ಜಿಲ್ಲೆಯವರಿಗೆ ಉಸ್ತುವಾರಿ ಹೊಣೆ ನೀಡಲಾಗಿತ್ತು. ಇನ್ನು ವಿವಾದಗಳ ಮೂಲಕ ಸುದ್ದಿಯಲ್ಲಿರುವ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಕೈಯಲ್ಲಿದ್ದ ಹಾಸನ ಜಿಲ್ಲೆಯ ಉಸ್ತುವಾರಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರಿಗೆ ನೀಡಲಾಗಿದೆ.
ಬೆಳಗಾವಿಗೆ ರಮೇಶ್ ಜಾರಕಿಹೊಳಿ/ ಹಾಸನಕ್ಕೆ ಕೆ. ಗೋಪಾಲಯ್ಯ
Please follow and like us: