ಬೆಳಗಾವಿಗೆ ರಮೇಶ್ ಜಾರಕಿಹೊಳಿ/ ಹಾಸನಕ್ಕೆ ಕೆ. ಗೋಪಾಲಯ್ಯ

ಭಾರಿ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೊನೆಗೂ ಜಲಸಂಪನ್ಮೂಲ ಖಾತೆ ಮಂತ್ರಿ ರಮೇಶ್ ಜಾರಕಿಹೊಳಿ ಪಾಲಾಗಿದೆ. ಹಾಸನ ಜಿಲ್ಲಾ ಉಸ್ತುವಾರಿಯನ್ನು ಕೆ. ಗೋಪಾಲಯ್ಯ ಅವರಿಗೆ ನೀಡಲಾಗಿದೆ.
ಇಲ್ಲಿಯವರೆಗೆ ಜಗದೀಶ್ ಶೆಟ್ಟರ್ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಈಗ ಆ ಸ್ಥಾನಕ್ಕೆ ಜಾರಕಿಹೊಳಿ ಬಂದಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಜಿಲ್ಲೆಯಲ್ಲಿ ನಾಲ್ಕು ಜನ ಸಚಿವರಿದ್ದರೂ ಹೊರ ಜಿಲ್ಲೆಯವರಿಗೆ ಉಸ್ತುವಾರಿ ಹೊಣೆ ನೀಡಲಾಗಿತ್ತು. ಇನ್ನು ವಿವಾದಗಳ ಮೂಲಕ ಸುದ್ದಿಯಲ್ಲಿರುವ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಕೈಯಲ್ಲಿದ್ದ ಹಾಸನ ಜಿಲ್ಲೆಯ ಉಸ್ತುವಾರಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರಿಗೆ ನೀಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಶಾಲೆ ಪುನರಾರಂಭ/ ಪೋಷಕರ ಅಭಿಪ್ರಾಯ ಸಂಗ್ರಹ

Tue Jun 2 , 2020
ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ಮುಚ್ಚಲಾಗಿದ್ದ ಶಾಲಾ ಕಾಲೇಜಿಗಳನ್ನು  ಪುನರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಅಧಿಕಾರಿಗಳ ಜೊತೆ ಚಿಂತನೆ ನಡೆಸುತ್ತಿದ್ದು, ಜುಲೈ ತಿಂಗಳಲ್ಲಿ ಇದಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಾಗೂ ಎಸ್‌ಡಿಎಂಸಿ ಸದಸ್ಯರು ಪೋಷಕರ ಅಭಿಪ್ರಾಯ ಸಂಗ್ರಹಿಸಿ ನಂತರ ತೀರ್ಮಾನಿಸಲಾಗುವುದು ಎಂದರು. ಕೊರೊನಾ ನಿಯಂತ್ರಣದ ದೃಷ್ಟಿಯಿಂದ ಶಾಲೆ ಪ್ರಾರಂಭವಾದ ನಂತರ ಸ್ಕೂಲ್‌ನಲ್ಲಿ […]

Advertisement

Wordpress Social Share Plugin powered by Ultimatelysocial