ಕೊರೊನಾ ಲಾಕ್ ಡೌನ್ ಸೋಂಕು ತಡೆಗಟ್ಟುವಲ್ಲಿ ಸಹಾಯವಾಗುತ್ತೋ ಇಲ್ಲವೋ ಗೊತ್ತಿಲ್ಲ, ಆದರೆ ನಾಗರಹೊಳೆ ಹುಲಿ ಅಭಯಾರಣ್ಯದಲ್ಲಿ ಬೇಟೆಗಾರರಿಗೆ ಅನುಕೂಲವಾಗಿರುವುದಂತೂ ಸುಳ್ಳಲ್ಲ. ಲಾಕ್ ಡೌನ್ ಇರುವಾಗ ಕಾಡುಪ್ರಾಣಿಗಳ್ಳರು ಕದ್ದುಮುಚ್ಚಿ ಓಡಾಡಿ ಜಿಂಕೆ ಸೇರಿದಂತೆ ಹಲವು ಪ್ರಾಣಿಗಳನ್ನು ಬೇಟೆಯಾಡಿ ಕೊಲ್ಲುತ್ತಿದ್ದಾರೆ. ಕೋವಿಡ್-೧೯ ಹಿನ್ನೆಲೆಯಲ್ಲಿ ಕಳೆದ ಬಾರಿ ದರ್ಘ ಲಾಕ್ ಡೌನ್ ಹೇರಿಕೆಯಾಗಿ ಅದು ಸಡಿಲಿಕೆಯಾದ ನಂತರ ನಾಗರಹೊಳೆ ಹುಲಿ ಅಭಯಾರಣ್ಯದಲ್ಲಿ ಪ್ರಾಣಿಗಳ ಬೇಟೆಯಾಡಿದ ೮ ಕೇಸುಗಳು ವರದಿಯಾದವು. ಇದೀಗ ಮತ್ತೆ ಲಾಕ್ ಡೌನ್ ಹೇರಿರುವುದು ಅರಣ್ಯಾಧಿಕಾರಿಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಸಾಂಬಾರ ಜಿಂಕೆ ಸೇರಿದಂತೆ ಕಾಡುಪ್ರಾಣಿಗಳನ್ನು ಬೇಟೆಯಾಡಿದ ಬಗ್ಗೆ ಮಾಹಿತಿ ಸಿಕ್ಕಿ ಇತ್ತೀಚೆಗೆ ಅರಣ್ಯಾಧಿಕಾರಿಗಳು ವೀರನಹೊಸಳ್ಳಿ ವಲಯದಲ್ಲಿ ಮನೆಯೊಂದರ ಮೇಲೆ ದಾಳಿ ನಡೆಸಿದರು. ಇಲ್ಲಿ ಸಾಂಬಾರ್ ಜಿಂಕೆಯ ಅಂಗಗಳು ಸಿಕ್ಕಿವೆ. ಆದರೆ ಆರೋಪಿಗಳು ಪತ್ತೆಯಾಗಿಲ್ಲ.
ಈ ಘಟನೆ ಕೆಲ ದಿನಗಳ ಹಿಂದೆ ನಡೆದಿದೆ. ಗುಪ್ತಚರ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತಲುಪುವ ಹೊತ್ತಿಗೆ ಬೇಟೆಗಾರರು ಸಾಂಬಾರ ಜಿಂಕೆಯೊಂದಿಗೆ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸ್ಥಳದ ಮಾಲೀಕರು ಬೆಂಗಳೂರಿನಲ್ಲಿದ್ದು ಲಾಕ್ ಡೌನ್ ನಿಂದಾಗಿ ಓಡಾಡಲು ಸಾಧ್ಯವಾಗದಿರುವುದರಿಂದ ಕಳ್ಳರಿಗೆ ಸುಲಭವಾಗಿದೆ.
ಬೇಟೆಗಾರರಿಗೆ ವರವಾದ ಲಾಕ್ ಡೌನ್
Please follow and like us: