ಬೈಕ್ಗಳನ್ನು ಜಪ್ತಿ ಮಾಡಿದ ಪೊಲೀಸರು

ಹೆಚ್ಚುತ್ತಿರುವ ಕೊರೊನಾ ವೈರಸ್ ತಡೆಗಟ್ಟಲು ಕೊನೆಗೂ ಜಿಲ್ಲಾಡಳಿತ ಒಂದು ವಾರದ ಲಾಕ್ಡೌನ್ ಜಾರಿ ಮಾಡಿದ್ದು, ಜಿಲ್ಲಾದ್ಯಂತ ಪರಿಷ್ಕೃತ ನಿಷೇದಾಜ್ಞೆ ಜಾರಿಗೊಳಿಸಿ ಲಾಕ್ ಡೌನ್ ಮಾಡಲಾಗಿದೆ. ಪೊಲೀಸರು, ಆರೋಗ್ಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಫೀಲ್ಡ್ಗಿಳಿದು ಮಾರುಕಟ್ಟೆ, ಸರ‍್ವಜನಿಕ ಸಂಚಾರಕ್ಕೆ ಬ್ರೇಕ್ ಹಾಕಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ ಲಾಕ್ಡೌನ್ಗೆ ಬೀದರ ನಗರ ಸೇರಿದಂತೆ ತಾಲೂಕುಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಲಾಕ್ಡೌನ್ ಹಿನ್ನೆಲೆ, ನಗರದ ಎಲ್ಲ ಅಂಗಡಿ-ಮುಂಗಟ್ಟುಗಳು, ಹೋಟೆಲ್, ಅಂಗಡಿಗಳು ಬಂದ್ ಆಗಿದ್ದು, ಜನ ಸಂಚಾರವಿಲ್ಲದೇ ರಸ್ತೆಗಳು ಖಾಲಿ ಖಾಲಿಯಾಗಿ ಗೋಚರಿಸುತ್ತಿದ್ದವು. ಬೆಳೆಗ್ಗೆ ೬ ರಿಂದ ೧೧ಗಂಟೆಯವರೆಗೆ ತರಕಾರಿ, ಹಾಲು, ಹಣ್ಣು ಅಂಗಡಿಗಳು ತೆರೆದಿದ್ದವು. ನಂತರ ಮೆಡಿಕಲ್ ಶಾಪ್ ಹೊರತುಪಡಿಸಿ, ಉಳಿದೆಲ್ಲಾ ಅಂಗಡಿಗಳು ಬಂದ್ ಆಗಿದ್ದವು.ಅನಗತ್ಯವಾಗಿ ರಸ್ತೆಗಿಳಿದವರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲಾಯಿತು. ಮತ್ತೆ ಕೆಲವರ ಬೈಕ್ಗಳನ್ನು ಜಪ್ತಿ ಮಾಡಿ ಠಾಣೆಗೆ ಕೊಂಡೊಯ್ಯುತ್ತಿರುವುದು ಕಂಡುಬಂತು.

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯನವರೇ, ಇದು ಲೆಕ್ಕ ಕೇಳುವ ಸಮಯವಲ್ಲ

Fri Jul 17 , 2020
ಸಿದ್ದರಾಮಯ್ಯ ಅವರಿಗೆ ಸಹಕಾರ ಕೇಳುವುದು ಮಾತ್ರ ಗೊತ್ತು. ಕೊಡುವುದು ಗೊತ್ತಿಲ್ಲ. ವಿರೋಧ ಪಕ್ಷವಾಗಿ ಆಡಳಿತ ಪಕ್ಷಕ್ಕೆ ಸಹಕಾರ ನೀಡಿ. ಹಾಸಿಗೆ ಇಲ್ಲ, ದಿಂಬಿಲ್ಲ ಎಂದು ದೂರುವುದನ್ನು ಬಿಟ್ಟು ಕಾಂಗ್ರೆಸ್ ಕೋವಿಡ್ ಆಸ್ಪತ್ರೆ ಆರಂಭಿಸಿ ರ‍್ಕಾರಕ್ಕೆ ಸಹಕಾರ ನೀಡಿ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ, ಇದು ಲೆಕ್ಕ ಕೇಳುವ ಸಮಯವಲ್ಲ. ಲೆಕ್ಕ ಎಲ್ಲಿಯೂ ಹೋಗುವುದಿಲ್ಲ. ಈಗ ಜನರ ರಕ್ಷಣೆ ರ‍್ಕಾರದ ಆದ್ಯತೆ. ಆಡಳಿತ ಪಕ್ಷ […]

Advertisement

Wordpress Social Share Plugin powered by Ultimatelysocial