ಭದ್ರತಾ ಪಡೆ ಎನ್ ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಗಡಿ ನಿಯಂತ್ರಣ ರೇಖೆ ಸಮೀಪ ಭದ್ರತಾ ಪಡೆಯ ಎನ್ ಕೌಂಟರ್‌ಗೆ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ, ಜಮ್ಮುಕಾಶ್ಮೀರ್ ಬಾರಾಮುಲ್ಲಾದ ನೌಗಾಮ್ ಸೆಕ್ಟರ್‌ನಲ್ಲಿ ನಡೆದಿದೆ. ಸೇನಾ ವಕ್ತಾರರ ಮಾಹಿತಿ ಪ್ರಕಾರ, ಇಂದು ನಸುಕಿನ ವೇಳೆ ನೌಗಾಮ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆ ಸಮೀಪ ಅನುಮಾನಾಸ್ಪದ ವ್ಯಕ್ತಿಗಳು ಪತ್ತೆಯಾಗಿರುವುದಾಗಿ ತಿಳಿಸಿದೆ. ಈ ವೇಳೆ ಭದ್ರತಾ ಪಡೆ ನಡೆಸಿದ ಹೊಂಚು ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಯಿತು ಎಂದು ವಿವರಿಸಿದೆ. ಉಗ್ರರ ಬಳಿ ಇದ್ದ ಎರಡು ಎಕೆ.೪೭ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ನಂತರ ಭದ್ರತಾ ಪಡೆ ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆಯಲ್ಲಿ ತೊಡಗಿದೆ. ಸೇನಾ ಅಧಿಕಾರಿಗಳ ಪ್ರಕಾರ, ಪಾಕಿಸ್ತಾನ ನಿರಂತರವಾಗಿ ಉಗ್ರರನ್ನು ಭಾರತದೊಳಕ್ಕೆ ಕಳುಹಿಸಲು ಯತ್ನಿಸುತ್ತಿರುವುದಾಗಿ ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಹೈದರಾಬಾದ್ ಏರ್‌ಪೋರ್ಟ್ಗೆ ಕಾಂಟ್ಯಾಕ್ಟ್ ಲೆಸ್ ಕಾರ್ ಪಾರ್ಕಿಂಗ್

Sat Jul 11 , 2020
ಕೋವಿಡ್ ೧೯ ಸಾಂಕ್ರಾಮಿಕವನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶಿಷ್ಟ ಹೆಜ್ಜೆಯನ್ನಿಟ್ಟಿರುವ ಹೈದರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ, ನಿಲ್ದಾಣದ ಸಮೀಪವಿರುವ ಕಾರ್ ಪಾರ್ಕಿಂಗ್ ವ್ಯವಸ್ಥೆಯನ್ನು ಸಂಪೂರ್ಣ ಸ್ಪರ್ಶ ರಹಿತ ತಂತ್ರ ಜ್ಞಾನಕ್ಕೆ ಉನ್ನತೀಕರಿಸಿದೆ. ದೇಶದಲ್ಲಿ ಇಂಥ ಪ್ರಯತ್ನವಾಗಿರುವುದು ಇದೇ ಮೊದಲು. ನ್ಯಾಷನಲ್ ಎಲೆಕ್ಟ್ರಾನಿಕ್ ಟೋಲ್ ಕಲೆಕ್ಷನ್ ಹಾಗೂ ನ್ಯಾಷ ನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಸ್ಥೆಗಳ ಜೊತೆಗೆ ಕೈ ಜೋಡಿಸಿರುವ ಜಿಎಚ್‌ಐಎಎಲ್ ಈ ವ್ಯವಸ್ಥೆಯನ್ನು ಜಾರಿಗೆಗೊಳಿಸಿದೆ. ಎನ್‌ಇಟಿಸಿ ಅಡಿಯಲ್ಲಿ […]

Advertisement

Wordpress Social Share Plugin powered by Ultimatelysocial