ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿಚಾರವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿ, ತಿದ್ದುಪಡಿ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವುದರಿಂದ ಸಾಕಷ್ಟು ಉಪಯೋಗ ಇದೆ. ಎಲ್ಲ ರೈತರಿಗೂ ಮತ್ತು ಕೃಷಿ ಬೆಳಗಳಿಗೆ, ತಿದ್ದುಪಡಿ ಕಾಯ್ದೆಯಿಂದ ಅನುಕೂಲ ಆಗಲಿದೆ. ಇದು ಮುಂದೆ ಸಿದ್ದರಾಮಯ್ಯ ಅವರಿಗೂ ಗೊತ್ತಾಗುತ್ತೆ. ಕಾಯ್ದೆಗೆ ತಿದ್ದುಪಡಿ ತರುತ್ತಿರುವುದನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ನಾನು ಚರ್ಚೆ ಮಾಡ್ತೇನೆ. ತಿದ್ದುಪಡಿ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ ಎಂದು ಹೇಳಿದರು.
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಎಲ್ಲರಿಗೂ ಅನುಕೂಲ
Please follow and like us: