ಭ್ರಷ್ಟಾಚಾರದ ಬಗ್ಗೆ ಡಿಕೆಶಿ ಮಾತನಾಡ್ತಾರೆ. ಭೂತದ ಬಾಯಲ್ಲಿ ಭಗವದ್ಗೀತೆ ಬರೋದಕ್ಕೂ ಇದಕ್ಕೂ ವ್ಯತ್ಯಾಸವಿಲ್ಲ” ಎಂದು ಡಿ.ಕೆ.ಶಿವಕುಮಾರ್ ಆರೋಪಕ್ಕೆ ಸಚಿವ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, “ಡಿಕೆಶಿ ನನ್ನನ್ನು ನೇಣಿಗೆ ಏರಿಸಲಿ ಎಂದಿದ್ದಾರೆ. ಅವರು ಪ್ರಾಮಾಣಿಕರಾ ಎಂದು ಅವರ ಆತ್ಮಸಾಕ್ಷಿಗೆ ಪ್ರಶ್ನೆ ಮಾಡಿಕೊಳ್ಳಲಿ. ಕಾಂಗ್ರೆಸಿಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ. ಇಂಟರ್ ನಲ್ ಕಾಂಪಿಟೇಷನ್ ನಡೆಯುತ್ತಿರಬಹುದು” ಎಂದು ವ್ಯಂಗ್ಯವಾಡಿದರು.
ಕೋವಿಡ್ ವಿಚಾರದಲ್ಲಿ ಭ್ರಷ್ಟಾಚಾರದ ಆಲೋಚನೆಯೂ ತಪ್ಪು. ಆಧಾರ ಇದ್ದರೆ ಸಿದ್ದರಾಮಯ್ಯ ಕಂಪ್ಲೇಂಟ್ ಮಾಡಲಿ. ಆಧಾರ ಇದ್ದರೆ ಕೋರ್ಟ್ ಹಾಗೂ ಲೋಕಾಯುಕ್ತಕ್ಕೆ ಸಲ್ಲಿಸಲಿ. ಆಧಾರ ಇಲ್ಲದೆ ಪ್ರಶ್ನೆ ಮಾಡೋಡು ತಪ್ಪು. ಎಲುಬಿಲ್ಲದ ನಾಲಗೆ ಏನು ಬೇಕಾದ್ರು ಮಾತಾನಾಡುತ್ತೆ ಅನ್ನೋದು ಸಿದ್ದರಾಮಯ್ಯಗೆ ಅಪ್ಲೇ ಆಗಬಾರದು. ಅವರು ಸಿಎಂ ಆಗಿದ್ದವರು ಎಂದು ಹೇಳಿದರು.