ವೈದ್ಯರ ನಿರ್ಲಕ್ಷ್ಯಕ್ಕೆ ಗೃಹಣಿ ಬಲಿ..!

ಮಕ್ಕಳಾಗಿಲ್ಲವೆಂದು ಒಂದೂವರೆ ತಿಂಗಳಿಂದ ನರ್ಸಿಂಗ್ ಹೋಮ್‌ನಲ್ಲಿ ಚಿಕಿತ್ಸೆ..!

ವೈದ್ಯರ ನಿರ್ಲಕ್ಷ್ಯಕ್ಕೆ ಅತಿಥಿ ಉಪನ್ಯಾಸಕಿ ಸಾವನ್ನಪ್ಪಿರೋ ಘಟನೆ ತುಮಕೂರಿನ ಮಹಾಲಕ್ಷ್ಮಿನಗರದಲ್ಲಿನ ಚಿನ್ಮಯ ನರ್ಸಿಂಗ್ ಹೋಮ್​ನಲ್ಲಿ ನಡೆದಿದೆ. ಮಹಿಳೆ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತಳ ಕುಟುಂಬಸ್ಥರು ಹಾಗೂ ಪತಿ ಆರೋಪಿಸಿದ್ದಾರೆ.

ಅತಿಥಿ ಉಪನ್ಯಾಸಕಿ ಮಾನಸ (30) ಮೃತ ದುರ್ದೈವಿ. ಮಾನಸ ಅವರು ತುಮಕೂರಿನ ವಿವಿಯಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. 5 ವರ್ಷಗಳ ಹಿಂದೆ ಅರುಣ್ ಎಂಬುವರನ್ನು ವರಿಸಿದ್ದರು. ನಂತರದ ದಾಂಪತ್ಯ ಜೀವನದಲ್ಲಿ ಮಕ್ಕಳು ಆಗಿರಲಿಲ್ಲ. ಹೀಗಾಗಿ ಕಳೆದ ಒಂದೂವರೆ ತಿಂಗಳಿನಿಂದ ಚಿನ್ಮಯ ಆಸ್ಪತ್ರೆ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ಗರ್ಭಕೋಶದಲ್ಲಿ 3 ಗ್ರಾಮ್ ಗಡ್ಡೆಯಿದೆ. ಅದನ್ನು ಆಪರೇಷನ್ ಮಾಡಿ ತೆಗೆಯಬೇಕೆಂದು ವೈದ್ಯರು ಹೇಳಿದ್ದರು. ಹೀಗಾಗಿ ಮೊನ್ನೆ ಸಂಜೆ ಆಪರೇಷನ್​ಗೆಂದು ಆಸ್ಪತ್ರೆಗೆ ಮಾನಸ ದಾಖಲಾಗಿದ್ದರು. ನಿನ್ನೆ ರಾತ್ರಿ ಆಪರೇಷನ್ ಮಾಡುವಾಗ ಸಾವನ್ನಪ್ಪಿದ್ದಾರೆ. ಇದಕ್ಕೆ ವೈದ್ಯರೇ ಕಾರಣ ಎಂದು ಕುಟುಂಬಸ್ಥರು, ಸಂಬಂಧಿಕರು ಆರೋಪಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ಮಾನಸಳನ್ನು ಕಳೆದುಕೊಂಡ ಪೋಷಕರು, ಆಕೆಯ ಗಂಡನ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನು ಈ ಬಗ್ಗೆ ಹೊಸ ಬಡಾವಣೆ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ದಾಖಲು ಮಾಡಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ಕಿಚ್ಚನ ಜನ್ಮದಿನದ ಹಿನ್ನೆಲೆ "ವೃಕ್ಷದೀಪ" ಅಭಿಯಾನಕ್ಕೆ ಚಾಲನೆ

Sun Sep 3 , 2023
ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾಯಿತು “ಹುಲಿ ನಾಯಕ” ಚಿತ್ರದ ಫಸ್ಟ್ ಲುಕ್..! ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ 50ನೇ ಹುಟ್ಟುಹಬ್ಬದ ಸಡಗರ. ಇದೇ ಸಂದರ್ಭದಲ್ಲಿ ಪತ್ರಕರ್ತ, ನಟ ಹಾಗೂ ನಿರ್ದೇಶಕ ಡಿ.ಜೆ ಚಕ್ರವರ್ತಿ(ಚಂದ್ರಚೂಡ್), “ವೃಕ್ಷದೀಪ” ಎಂಬ ಹೆಸರಿನಲ್ಲಿ ಒಂದು ಲಕ್ಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇತ್ತೀಚೆಗೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ವೃಕ್ಷದೀಪ ಅಭಿಯಾನಕ್ಕೆ ಚಾಲನೆ ನೀಡಿದರು. “ಅಭಿನಯ ತಿಲಕ” ಎಂಬ ಅಭಿಮಾನದ ಹಾಡನ್ನು ಚಲವಾದಿ ಮಹಾಸಭಾದ […]

Advertisement

Wordpress Social Share Plugin powered by Ultimatelysocial