ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ ನಿಲ್ಲಿಸುವುದು ಬೇಡ: ಸಿಎಂ

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ.ಯಡಿಯೂರಪ್ಪ ಹಣಕಾಸು ಸಮಸ್ಯೆಯಾದರು ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ ಮಾಡುವುದನ್ನು ನಿಲ್ಲಿಸುವುದು ಬೇಡ ಎಂದು ಅಧಿಕಾರಿಗಳಿಗೆ ನರ‍್ದೇಶನ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳ ಅಭ್ರ‍್ಥಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಗಣಿತ, ವಿಜ್ಞಾನ ಶಿಕ್ಷಕರ ಕೊರತೆ ನೀಗಿಸಲು ಬಿ.ಎಡ್. ಮಾಡಿರುವ ಇಂಜಿನಿಯರಿಂಗ್ ಪದವೀಧರರ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ.  ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ ಕೇಂದ್ರ ರ‍್ಕಾರದ ವಿಶೇಷ ನೆರವು ಕೂಡ ಘೋಷಿಸಲಾಗಿದ್ದು, ಕೋವಿಡ್ ನಿಂದ ಶಿಕ್ಷಣ ಇಲಾಖೆ ಮೇಲೆ ದೊಡ್ಡ ಪರಿಣಾಮವಾಗಿರುವುದರಿಂದ ಮುಂದಿನ ದಿನಗಳಲ್ಲಿ ಶಾಲೆಗಳು ಹಾಗೂ ತರಗತಿಗಳು ಹೇಗೆ ನಡೆಸುವುದು ಎಂಬುದೆ ದೊಡ್ಡಸವಾಲಾಗಿದೆ. ಜೂನ್ ೨೫ ರಿಂದ ಎಸ್ ಎಸ್ ಎಲ್ ಸಿ. ಪರೀಕ್ಷೆಗಳ ಮುನ್ನೆಚ್ಚರಿಕ್ಕೆ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಅಂತರ್ ಜಿಲ್ಲಾ ವಿಶೇಷ ರೈಲು ಸೇವೆ ಆರಂಭ

Fri May 22 , 2020
ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ನಂತರ ಇದೇ ಮೊದಲ ಬಾರಿಗೆ ಅಂತರ್ ಜಿಲ್ಲಾ ರೈಲು ಸೇವೆ ಪುನರ್ ಆರಂಭಗೊಂಡಿದ್ದು,ಶುಕ್ರವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲು ಬೆಳಗಾವಿಗೆ ನಿರ್ಗಮಿಸಿತು. ರೈಲಿನಲ್ಲಿ ಒಳಗಡೆ ಇದ್ದ ಕೆಲ ಪ್ರಯಾಣಿಕರು ಹಾಗೂ ನಿಲ್ದಾಣದಲ್ಲಿದ್ದ ಅಧಿಕಾರಿಗಳು, ಪೊಲೀಸರು ಚಪ್ಪಾಳೆ ತಟ್ಟುವ ಮೂಲಕ ಈ ರೈಲು ಸೇವೆಗೆ ಹರ್ಷ ವ್ಯಕ್ತಪಡಿಸಿದರು. ರಾಜ್ಯದೊಳಗೆ ಸಂಚರಿಸಿದ ಮೊದಲ ರೈಲಿಗೆ ನಿಲ್ದಾಣದಲ್ಲಿನ ಹಂಗಾಮಿ ಸ್ವಚ್ಛತಾ […]

Advertisement

Wordpress Social Share Plugin powered by Ultimatelysocial