ರಾಯಬಾಗ ತಾಲ್ಲೂಕಿನ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹೆಚ್.ಎ ಭಜಂತ್ರಿ ನಿವೃತ್ತಿ ಹೊಂದಿದ ಪ್ರಯುಕ್ತ ರಾಯಬಾಗ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬಿಳ್ಕೊಡುವ ಸಮಾರಂಭ ಜರುಗಿತು. ಸರ್ಕಾರಿ ಸೇವೆಗೆ ಸೇರಿದ ಮೇಲೆ ನಿವೃತ್ತಿ ಅನಿವಾರ್ಯ, ಆದರೆ ತಮಗೆ ಸಿಕ್ಕ ಅವಧಿಯಲ್ಲಿ ಮಾಡಿರುವ ಕಾರ್ಯ ಸಾರ್ವಜನಿಕ ವಲಯದಲ್ಲಿ ಅಚ್ಚಳಿಯದೆ ಸಮಾಜದಲ್ಲಿ ಉತ್ತಮ ಹೆಸರು ಗಳಿಸದವರ ಪೈಕಿ ರಾಯಬಾಗ ತಾಲ್ಲೂಕಿನ ಶಿಕ್ಷಣಾಧಿಕಾರಿ ಹೆಚ್.ಎ ಭಜಂತ್ರಿ , ಸುಮಾರು 15 ತಿಂಗಳುಗಳ ಹಿಂದೆ ರಾಯಬಾಗ ತಾಲೂಕಿನ ಶಿಕ್ಷಣ ಅಧಿಕಾರಿರಾಗಿ ಅಧಿಕಾರ ವಹಿಸಿಕೊಂಡ ಇವರು ಶಿಕ್ಷಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಿ, ಕರ್ತವ್ಯ ನಿರ್ವಹಣೆಯಲ್ಲಿ ರಾಜಿ ಇಲ್ಲದೆ ಸ್ಥಳೀಯ ಶಾಸಕರ, ಅಧಿಕಾರಿಗಳ ಸಹಕಾರವನ್ನು ಪಡೆದುಕೊಂಡು ತಾಲೂಕಿನ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದರು.
ಇವರ ಶಿಕ್ಷಣದ ಸೇವೆಯನ್ನು ಗುರುತಿಸಿ ರಾಷ್ಟ್ರೀಯ ಸಮಾಜ ಕಲ್ಯಾಣ ಸೇವಾ ಸಂಸ್ಥೆ ಹಾಗೂ ಕನ್ನಡ ಸಂಸ್ಕೃತ ಜಾನಪದ ಕಲಾವಿದರ ಸಂಘ ಬೆಳಗಾವಿ ಮತ್ತು ಸ್ವಾಮಿ ವಿವೇಕಾನಂದ ಮಾತಾ ಸಾವಿತ್ರಿಬಾಯಿ ಫುಲೆ ಹಾಗೂ ಸರ್ವ ಪಲ್ಲಿ ರಾಧಾಕೃಷ್ಣನ್ ಅವರ ನೆನಪಿನ ನಿಮ್ಮಿತ್ಯವಾಗಿ ಸುವರ್ಣ ಕರ್ನಾಟಕ ಶಿಕ್ಷಣ ರತ್ನ ರಾಜ್ಯ ಮಟ್ಟದ ಪ್ರಶಸ್ತಿ 2020 ಕೊಟ್ಟು ಗೌರವಿಸಿದರು.