ಮಧುಗಿರಿ ಪಟ್ಟಣದಲ್ಲಿ ಸ್ವಯಂಘೋಷಿತ ಲಾಕ್‌ಡೌನ್

ಮಧುಗಿರಿ ಪಟ್ಟಣದಲ್ಲಿ ಸ್ವಯಂಘೋಷಿತ ಲಾಕ್ ಡೌನ್ ಗೆ ಕೆಲವರು ಕರೆ ನೀಡಿದ್ದು, ಪಟ್ಟಣದಲ್ಲಿ ಕರೆ ನೀಡಿರುವ ಸ್ವಯಂಪ್ರೇರಿತ ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲವರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಬೆದರಿಕೆ ಒಡ್ಡುತ್ತಿದ್ದಾರೆ. ಈ ಹಿನ್ನಲೆ ನಮಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ತಹಸೀಲ್ದಾರ್ ಡಾ.ಜಿ.ವಿಶ್ವನಾಥ್ ಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಸಾರ್ವಜನಿಕರು ಮನವಿ ಸಲ್ಲಿಸಿದ ವೇಳೆ ಮಾತನಾಡಿದ ಅವರು, ಪಟ್ಟಣದಲ್ಲಿ ಕೆಲವರು ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಗೆ ಕರೆ ನೀಡಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಆದರೆ ಇದನ್ನು ಮುಂದಿಟ್ಟುಕೊಂಡು ಅಕ್ರಮವಾಗಿ ಮತ್ತು ದೌರ್ಜನ್ಯದಿಂದ ಬಾಗಿಲು ಮುಚ್ಚಿಸಲು ಪ್ರಯತ್ನಿಸಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಯಾರಾದರೂ ಈ ರೀತಿ ವರ್ತಿಸಿದರೆ ಅವರ ವಿರುದ್ಧ ದೂರು ನೀಡಬಹುದು ಎಂದು ತಹಸೀಲ್ದಾರ್ ಡಾ.ಜಿ.ವಿಶ್ವನಾಥ್ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ನಗರಸಭೆಗೆ ಎಂಟ್ರಿ ಕೊಟ್ಟ ಕೊರೊನಾ

Thu Jul 16 , 2020
ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ಇದೀಗ ಬೆಂಗಳೂರು ಗ್ರಾಮಂತರ ಜಿಲ್ಲೆಯ ನೆಲಮಂಗಲ ನಗರಸಭೆಗೆ ಕೊರೊನಾ ವೈರಸ್ ಎಂಟ್ರಿಕೊಟ್ಟಿದೆ. ವಾಟರ್  ಸಪ್ಲೈಯರ್ ಗೆ ಕೊರೊನಾ ಸೋಂಕು ತಗುಲಿದೆ. ನಗರಸಭೆಯ ಸುತ್ತಮುತ್ತಲೂ ಸ್ಯಾನಿಟೈಸೇಷನ್ ಮಾಡಿ  ಮತ್ತು 2 ದಿನಗಳಕಾಲ ನಗರಸಭೆ ಕಚೇರಿಯನ್ನು ಸೀಲ್ ಡೌನ್ ಮಾಡಿ ಎಂದು ನೆಲಮಂಗಲ ನಗರಸಭೆ ಆಯುಕ್ತ ಮಂಜುನಾಥ ಹೇಳಿಕೆ ನೀಡಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial