ಮಧುಗಿರಿ ಪಟ್ಟಣದಲ್ಲಿ ಸ್ವಯಂಘೋಷಿತ ಲಾಕ್ ಡೌನ್ ಗೆ ಕೆಲವರು ಕರೆ ನೀಡಿದ್ದು, ಪಟ್ಟಣದಲ್ಲಿ ಕರೆ ನೀಡಿರುವ ಸ್ವಯಂಪ್ರೇರಿತ ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲವರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಬೆದರಿಕೆ ಒಡ್ಡುತ್ತಿದ್ದಾರೆ. ಈ ಹಿನ್ನಲೆ ನಮಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ತಹಸೀಲ್ದಾರ್ ಡಾ.ಜಿ.ವಿಶ್ವನಾಥ್ ಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಸಾರ್ವಜನಿಕರು ಮನವಿ ಸಲ್ಲಿಸಿದ ವೇಳೆ ಮಾತನಾಡಿದ ಅವರು, ಪಟ್ಟಣದಲ್ಲಿ ಕೆಲವರು ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಗೆ ಕರೆ ನೀಡಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಆದರೆ ಇದನ್ನು ಮುಂದಿಟ್ಟುಕೊಂಡು ಅಕ್ರಮವಾಗಿ ಮತ್ತು ದೌರ್ಜನ್ಯದಿಂದ ಬಾಗಿಲು ಮುಚ್ಚಿಸಲು ಪ್ರಯತ್ನಿಸಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಯಾರಾದರೂ ಈ ರೀತಿ ವರ್ತಿಸಿದರೆ ಅವರ ವಿರುದ್ಧ ದೂರು ನೀಡಬಹುದು ಎಂದು ತಹಸೀಲ್ದಾರ್ ಡಾ.ಜಿ.ವಿಶ್ವನಾಥ್ ತಿಳಿಸಿದ್ದಾರೆ.
ಮಧುಗಿರಿ ಪಟ್ಟಣದಲ್ಲಿ ಸ್ವಯಂಘೋಷಿತ ಲಾಕ್ಡೌನ್
Please follow and like us: