ಮಧುಗಿರಿ ಪಟ್ಟಣದ ತಾಲ್ಲೂಕು ಕಚೇರಿ ಆವರಣ

ಮಧುಗಿರಿ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಬೆಳದಿದ್ದ ನಿರುಪಯುಕ್ತ ಗಿಡ ಹಾಗೂ ಮುಳ್ಳಿನ ಗಿಡಗಳನ್ನು ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ನಂತರ ಮಾತನಾಡಿದ ತಹಶೀಲ್ದಾರ್ ಡಾ. ಜಿ.ವಿಶ್ವನಾಥ್ ಇಲಾಖೆಯ ಆವರಣದಲ್ಲಿ ಬೆಳೆದಿರುವ ನಿರುಪಯುಕ್ತ ಗಿಡಗಳು ಹಾಗೂ ಕಾಫಿ ಲೋಟಗಳು ಸೇರಿದಂತೆ ತ್ಯಾಜ್ಯ ವಸ್ತುಗಳು ಹೆಚ್ಚಾಗಿದ್ದವು. ಇದರಿಂದ ರೋಗಗಳು ಹರಡದಂತೆ ಈ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ತಾಲ್ಲೂಕು ಕಚೇರಿಗೆ ಕೆಲಸ ಕಾರ್ಯಗಳಿಗೆ ಬರುವ ಜನರು ಸ್ವಚ್ಚತೆಯನ್ನು ಕಾಪಾಡಬೇಕೆಂದು ತಿಳಿಸಿದರು. ಹಾಗೂ ಆಹಾರ ಶಿರೆಸ್ತೆದಾರ್ ಗಣೇಶ್, ಕಂದಾಯ ನಿರೀಕ್ಷಕ ಸಿದ್ದರಾಜು, ಗ್ರಾಮಲೆಕ್ಕಿಗರಾದ ಜಿ.ಜಯರಾಮಯ್ಯ, ಶಿವರಾಮಯ್ಯ, ಹಾಗೂ ಮತ್ತಿತರ ನೌಕರರು ಕಾರ್ಯದಲ್ಲಿ ಭಾಗಿಯಾಗಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ವಿಜಯಪುರ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷ್ಯ

Sat Jul 18 , 2020
ವಿಜಯಪುರ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಮಗು ಸಾವನ್ನಪ್ಪಿರುವ ಘಟನೆ ವಿಜಯಪುರದ ಜಿಲ್ಲಾ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಹೆರಿಗೆಗೆಂದು ಜಿಲ್ಲಾ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ನಾರ್ಮಲ್ ಡೆಲಿವರಿಯಾಗುತ್ತೆ ಎಂದು ಹೇಳಿದ್ದ ವೈದ್ಯರು. ರಕ್ತ ತರಲು ಸೂಚಿಸಿದ್ದ ವೈದ್ಯರು, ನಂತರ ತಾಯಿ ಮಗುವಿನ ಸಾವಿನ ವಿಚಾರವನ್ನ ಪೋಷಕರಿಗೆ ತಿಳಿಸಿದ್ದಾರೆ. ಕವಿತಾ ಅಂಜುಟಗಿ ಸಾವನ್ನಪ್ಪಿದ ತಾಯಿ,  ಜೊತೆಗೆ ಮಗು ಕೂಡ ಸಾವು ಆಸ್ಪತ್ರೆ ಎದುರು ಕಣ್ಣೀರು ಹಾಕುತ್ತಿರುವ […]

Advertisement

Wordpress Social Share Plugin powered by Ultimatelysocial