ಕೊರೊನಾ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಯಲು ಜುಲೈ ೧೬ರಿಂದ ಶಿವಮೊಗ್ಗ ಜಿಲ್ಲೆಯ ಎಲ್ಲೆಡೆ ಮಧ್ಯಾಹ್ನ ೨ರ ನಂತರ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಪ್ರತಿ ದಿನ ಬೆಳಿಗ್ಗೆ ೫ರಿಂದ ಮಧ್ಯಾಹ್ನ ೨ರವರೆಗೆ ಮಾತ್ರ ಜನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಪರಿಣಾಮಕಾರಿಯಾಗಿ ಭಾಗಶಃ ಲಾಕ್ ಡೌನ್ ಜಾರಿಗೊಳಿಸಲು ಪೊಲೀಸರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಈ ನಿರ್ಧಾರ ಪ್ರಕಟಿಸಿದರೆ. ಯಾವುದೇ ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶ ಇಲ್ಲ. ಎಲ್ಲಾ ಹಬ್ಬಗಳನ್ನೂ ಮನೆಗಳಲ್ಲಿ ಆಚರಿಸಬಹುದು. ಮದುವೆ, ಅಂತ್ಯಸAಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡವನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಗೂಡುವುದು, ಮಾಸ್ಕ್ ಧರಿಸದೇ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿನೆ ನೀಡಲಾಗಿದೆ.
ಮಧ್ಯಾಹ್ನ 2ರ ನಂತರ ಸಂಪೂರ್ಣ ಲಾಕ್ಡೌನ್
Please follow and like us: