ಮನೆಮುಂದೆ ಮಲಗಿದ್ದ ದಂಪತಿ ಹತ್ಯೆ ಮಾಡಿದ ದುಷ್ಕರ್ಮಿ.. ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರೋಪಿಯ ಹತ್ಯೆ

ಲಗಿದ್ದ ದಂಪತಿಯನ್ನು ದುಷ್ಕರ್ಮಿಯೊಬ್ಬ ಹತ್ಯೆ ಮಾಡಿರುವ ಘಟನೆ ಅನಂತಪುರದಲ್ಲಿ ನಡೆದಿದೆ.

ಅನಂತಪುರ (ಆಂಧ್ರಪ್ರದೇಶ): ಮನೆಯ ಮುಂದೆ ಮಲಗಿದ್ದ ದಂಪತಿಯನ್ನು ದುಷ್ಕರ್ಮಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಅನಂತಪುರ ಜಿಲ್ಲೆಯ ಯಡಿಕಿ ಗ್ರಾಮದಲ್ಲಿ ನಡೆದಿದೆ.

ನಿಟ್ಟೂರಿನ ಸೊಮ್ಮಕ್ಕ ಮತ್ತು ಬಾಲುರಾಜು ಮೃತರೆಂದು ಗುರುತಿಸಲಾಗಿದೆ. ಅದೇ ಗ್ರಾಮದ ಪ್ರಾಸಾದ್ ಎಂಬ ಆರೋಪಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ದಂಪತಿಯ ಕೊಲೆ ಮಾಡಿ ಸುಮ್ಮನಾಗದ ಕ್ರೋರಿ ಪಕ್ಕದಲ್ಲಿ ಮಲಗಿದ್ದ ಮಗಳನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಜೋರಾಗಿ ಕಿರುಚಾಟ ನಡೆಸಿದ್ದಾಳೆ. ಕಿರುಚಾಟ ಕೇಳಿದ ಗ್ರಾಮದ ಜನ ಕೂಡಲೇ ಎಚ್ಚೆತ್ತು, ವ್ಯಕ್ತಿಯನ್ನು ಕಲ್ಲೆಸೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Please follow and like us:

tmadmin

Leave a Reply

Your email address will not be published. Required fields are marked *

Next Post

ನಾಯಿ ಕಚ್ಚಿ ರೇಬೀಸ್‌ನಿಂದ ವಿದ್ಯಾರ್ಥಿ ಸಾವು, ಸಾಕುಪ್ರಾಣಿಗಳಿಗೆ ಲಸಿಕೆ ಹಾಕಿಸುವಂತೆ ಜನರಿಗೆ ಸರ್ಕಾರ ಸೂಚನೆ 6m

Sat Sep 16 , 2023
ಇಟಾನಗರ: ಇಟಾನಗರದಲ್ಲಿ 18 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬರು ನಾಯಿ ಕಚ್ಚಿ ರೇಬೀಸ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಘಟನೆ ನಂತರ ತಮ್ಮ ಸಾಕುಪ್ರಾಣಿಗಳಿಗೆ ಲಸಿಕೆ ಹಾಕಿಸುವಂತೆ ಜಿಲ್ಲಾಡಳಿತ ಜನರಿಗೆ ಸೂಚನೆ ನೀಡಿದ್ದಾರೆ.   ಜುಲ್ಲಾಂಗ್‌ನಲ್ಲಿರುವ ಡಾನ್ ಬಾಸ್ಕೋ ಕಾಲೇಜಿನ ವಿದ್ಯಾರ್ಥಿ ನ್ಯಾರೋ ರುಸಿಂಗ್ ಗುರುವಾರ ಮೃತಪಟ್ಟಿದ್ದಾರೆ ಎಂದು ರಾಜ್ಯ ಕಣ್ಗಾವಲು ಅಧಿಕಾರಿ ವೈದ್ಯ ಲೋಬ್ಸಾಂಗ್ ಜಂಪಾ ತಿಳಿಸಿದ್ದಾರೆ. ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿದ್ದು, ನಾಯಿ ಕಚ್ಚಿದ ನಂತರ ಜನರು […]

Advertisement

Wordpress Social Share Plugin powered by Ultimatelysocial