ಮಳೆ ಮುನ್ಸೂಚನೆ ನೀಡುವ ಮೊಬೈಲ್ ಆ್ಯಪ್

ಯಲಹಂಕದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಂದಾಯ ಸಚಿವ  ಆರ್. ಅಶೋಕ,  ಕಂದಾಯ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿಂದು ಏರ್ಪಡಿಸಿದ್ದ ನಗರ ಪ್ರದೇಶ ಪ್ರವಾಹ ನಿರ್ವಹಣೆ ಸನ್ನದ್ಧತೆ ಕಾರ್ಯಾಗಾರವನ್ನು ಉದ್ಘಾಟಿಸಿ, ಇತ್ತೀಚಿನ ವರ್ಷಗಳಲ್ಲಿ ಪ್ರಪಂಚದಾದ್ಯಂತ ನೈಸರ್ಗಿಕ ವಿಕೋಪಗಳು ಪದೇ ಪದೇ  ಸಂಭವಿಸುತ್ತಿದ್ದು, ಈ ನೈಸರ್ಗಿಕ ವಿಕೋಪಗಳಲ್ಲಿ ನಗರ ಪ್ರವಾಹವೂ ಒಂದು. ತೀವ್ರತರ ಭೂ ಬಳಕೆಯಿಂದಾಗಿ ಪ್ರಮುಖ ನಗರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಪ್ರತಿ  ಮಳೆಗಾಲದಲ್ಲೂ ಮರುಕಳಿಸುತ್ತಿರುವುದನ್ನು ಕಾಣಬಹುದಾಗಿದೆ ಎಂದರು. ಹಾಗೆಯೇ ಬೆಂಗಳೂರು ನಗರದ ನಿಗದಿತ ವಲಯವಾರು ಪ್ರದೇಶಕ್ಕೆ ಅನ್ವಯವಾಗುವ  ಮಳೆ ಮುನ್ಸೂಚನೆ, ಪ್ರವಾಹ ಮುನ್ನೆಚ್ಚರಿಕೆಗಳನ್ನು ನೀಡಲು ಬೆಂಗಳೂರು ಮೇಘ ಸಂದೇಶ ಎಂಬ  ಮೊಬೈಲ್‌ ಆ್ಯಪ್‌ ಹಾಗೂ ವೆಬ್‌ಸೈಟನ್ನು ಲೋಕಾರ್ಪಣೆ ಮಾಡಿದರು.

 

Please follow and like us:

Leave a Reply

Your email address will not be published. Required fields are marked *

Next Post

ಮಹಾರಾಷ್ಟ್ರದಲ್ಲಿ ಹೆಚ್ಚಾದ ಮಳೆ  ರೈತರಲ್ಲಿ ಮುಖದಲ್ಲಿ ಮಂದಹಾಸ

Sat Jun 6 , 2020
ಉತ್ತರ ಕರ್ನಾಟಕದ ಜೀವನಾಡಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭಗೊAಡಿದೆ. ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾಗಿರುವ ಕಾರಣ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಪರಿಣಾಮ ನೀರಿನ ಒಳಹರಿವು ಜೂನ್ ಮೊದಲ ವಾರದಲ್ಲೇ ಆರಂಭಗೊAಡಿದೆ. ಈಗಾಗಲೇ ೧೨.೭೬೧ ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬಂದಿದೆ. ಇದರ ಜತೆಗೆ ಹಿಪ್ಪರಗಿ ಜಲಾಶಯದಿಂದ ೧೦ ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವ ಕಾರಣ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಮಹಾರಾಷ್ಟ್ರದ ನೀರು ಕರ್ನಾಟಕಕ್ಕೆ ಬಂದು ಸೇರುವ […]

Advertisement

Wordpress Social Share Plugin powered by Ultimatelysocial