ಮಹಾರಾಷ್ಟ್ರಕ್ಕೆ ಮುಂಗಾರು ಪ್ರವೇಶವಾಗಿದ್ದು, ಮುಂಗಾರು ಚುರುಕಾಗಿದೆ ವಾರಾಂತ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಪ್ರದೇಶದ ಬಿಜ್ನೋರ್ , ಮೊರದಾಬಾದ್, ಫಿಲಿಬಿಟ್ ರಾಮ್ ಪುರ್, ಬರೇಲಿ ಪ್ರದೇಶದಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗಾಳಿಯ ಗಂಟೆಯಲ್ಲಿ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 48 ಗಂಟೆಯಲ್ಲಿ ವಿಪರೀತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಬೈನಲ್ಲಿ ಶನಿವಾರ ಜೋರು ಮಳೆಯಾಗಲಿದ್ದು, ಭಾನುವಾರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿಯಲ್ಲಿ ಜೂ.14 ರವರೆಗೆ ಆರೆಂಜ್ ಅಲರ್ಟ್ ಹಾಗೂ ಜೂನ್ 15 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣ ಇರಲಿದ್ದು ಜೂನ್ 14 ರಂದು ಭಾರಿ ಮಳೆಯಾಗಲಿದೆ. ಜೂನ್ 15 ರಂದು ಕರಾವಳಿ ಪ್ರದೇಶದಲ್ಲಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹೆಚ್ಚಿನ ಮಳೆ ಸುರಿಯಲಿದೆ.ಎಂದು ಹವಾಮಾನ ಇಲಾಖೆ ತಿಳಿಸಿದೆ.