ರಾಜ್ಯದಲ್ಲಿ ಜಾರಿಯಲ್ಲಿರುವ ಕೋವಿಡ್ ಲಾಕ್ಡೌನ್ ಹಿನ್ನೆಲೆ ಮಕ್ಕಳ ಶಿಕ್ಷಣ ಮೇಲೆ ಯಾವುದೇ ಪರಿಣಾಮ ಉಂಟಾಗದAತೆ ನೋಡಿಕೊಳ್ಳಲು ಸಿಎಂ ಉದ್ಧವ್ ಠಾಕ್ರೆ ಸರಕಾರ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ಆನ್ ಲೈನ್ ಮಾಧ್ಯಮಗಳ ಮೂಲಕ ಪ್ರಾರಂಭಿಸಲು ಅವಕಾಶ ನೀಡಿದೆ.ಮುನ್ನೆಚ್ಚರಿಕೆಯೊಂದಿಗೆ ಶಾಲೆ ತೆರೆಯಿರಿ : ಕೋವಿಡ್-೧೯ ಪ್ರಕರಣಗಳಿಲ್ಲದ ಗ್ರಾಮಗಳ ಕೆಲವು ಭಾಗಗಳಲ್ಲಿ ಮುನ್ನೆಚ್ಚರಿಕೆಯೊಂದಿಗೆ ಶಾಲೆಗಳನ್ನು ತೆರೆಯಬಹುದು ಎಂದು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ಉದ್ಧವ್ ಠಾಕ್ರೆ ಅವರು ಶಿಕ್ಷಣ ಇಲಾಖೆ ಸಚಿವೆ ವರ್ಷಾ ಗಾಯಕ್ವಾಡ್, ರಾಜ್ಯದ ಮುಖ್ಯ ಕಾರ್ಯದರ್ಶಿ ಅಜೋಯ್ ಮೆಹ್ತಾ, ಶಾಲಾ ಶಿಕ್ಷಣದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದನಾ ಕೃಷ್ಣ ಮತ್ತು ಉನ್ನತ ಶಿಕ್ಷಣ ಕಾರ್ಯದರ್ಶಿ ಸೌರವ್ ವಿಜಯ್ ಹಾಗೂ ರಾಜ್ಯದ ಇತರ ಅಧಿಕಾರಿಗಳೊಂದಿಗೆ ಸೋಮವಾರ ಬೆಳಗ್ಗೆ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಮಹಾರಾಷ್ಟç ಸಿಎಂ ನಿಂದ ಗ್ರೀನ್ ಸಿಗ್ನಲ್
Please follow and like us: