ಮಾಜಿ ಸಿಎಂ ಕುಮಾರಸ್ವಾಮಿಗೆ ಸಿ.ಸಿ. ಪಾಟೀಲ್‌ ತಿರುಗೇಟು…!

ರಾಜ ಕಾರಣಕ್ಕಾಗಿ ಕೆಲವರನ್ನು ತುಷ್ಟಿಕರಣ ಮಾಡಲು ಆರೆಸ್ಸೆಸ್ಸನ್ನು ದೂಷಿಸುವುದು ಕೆಲವು ರಾಜಕಾರಣಿಗಳ ಚಾಳಿಯಾಗಿದೆ. ಈಗ ಉಪಚುನಾವಣೆಗಳು ಹತ್ತಿರವಿರು ವುದರಿಂದ ಕುಮಾರಸ್ವಾಮಿಯವರಿಗೂ ಚಾಳಿ ಕಾಡುತ್ತಿರಬಹುದು ಎಂದು ಸಚಿವ ಸಿ.ಸಿ.ಪಾಟೀಲ್ ಟೀಕಿಸಿದ್ದಾರೆ.ಆರ್ಎಸ್ಎಸ್ ಕೋಟ್ಯಂತರ ಜನರಿಗೆ ದೇಶ ಸೇವೆಯ ಬಗ್ಗೆ ಮತ್ತು ಆಪತ್ತಿನ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಸೇವೆ ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಪಾಠ ಹೇಳಿಕೊಟ್ಟಿದೆಯೇ ವಿನಹ, ಎಂದಿಗೂ ವಂಶಪಾರಂಪರ್ಯ ಅಥವಾ ಕುಟುಂಬ ರಾಜಕಾರಣವನ್ನು ಬೋಸಿಲ್ಲ. ಸಂಘಟನೆಯಲ್ಲಿ ಕೆಲಸ ಮಾಡುತ್ತಿರುವ ಇನ್ನೂ ಎಷ್ಟೋ ಮಂದಿ ಯಾವುದೇ ಚುನಾವಣಾ ರಾಜಕೀಯಕ್ಕೆ ಆಗಲಿ ಅಥವಾ ಅಕಾರಕ್ಕಾಗಲೀ ಗಂಟು ಬಿದ್ದಿಲ್ಲ ಎಂಬುದು ಕುಮಾರಸ್ವಾಮಿಯವರಿಗೆ ಅರ್ಥವಾಗಬೇಕಿತ್ತು. ಆರ್ಎಸ್ಎಸ್ ಸೇವಾ ಮನೋ ಭಾವವನ್ನು ಹಿಂದೆ ದೇವೇಗೌಡರೇ ಸ್ವತಹ ಮನಃ ಪೂರ್ತಿಯಾಗಿ ಪ್ರಶಂಸಿಸಿದ್ದರು ಎಂಬುದನ್ನು ನೆನಪು ಮಾಡಿಕೊಂಡರೆ ಸಾಕು ಎಂದು ಲೇವಡಿ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ನಾಳೆಯಿಂದ ಜಗಮಗಿಸಲಿದೆ ಸಾಂಸ್ಕೃತಿಕ ನಗರಿ ಮೈಸೂರು

Wed Oct 6 , 2021
ಮೈಸೂರು,ಅ.6- ದಸರಾ ಮಹೋತ್ಸವದ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ನಾಳೆಯಿಂದ ಅ.15ರವರೆಗೆ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ದೊರೆಯಲಿದೆ. ನಗರದ ಹೊರ ವರ್ತುಲ ರಸ್ತೆಯ ಒಳ ಭಾಗಕ್ಕೆ ಸೇರಿದ ರಸ್ತೆಗಳು, ವೃತ್ತಗಳನ್ನು ದೀಪಾಲಂಕಾರಗೊಳಿಸಲಾಗಿದ್ದು, ಅತ್ಯಂತ ಆಕರ್ಷಣಿಯ ಹಾಗೂ ವಿನೂತನ ರೀತಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ. ಈ ದೀಪಾಲಂಕಾರವನ್ನು ಪ್ರತೀ ದಿನ ಸಂಜೆ 6.30 ರಿಂದ ರಾತ್ರಿ 9.30 ಗಂಟೆಯವರೆಗೆ ಬೆಳಗಿಸಲಾಗುತ್ತದೆ. ಮೈಸೂರು ನಗರದ ನಿವಾಸಿಗಳು, ಪ್ರವಾಸಿಗರು, ಯಾತ್ರಾರ್ಥಿಗಳು, ಗಣ್ಯ ವ್ಯಕ್ತಿಗಳು ದೀಪಾಲಂಕಾರವನ್ನು ವೀಕ್ಷಿಸಲು ಬರುತ್ತಿರುವುದರಿಂದ […]

Advertisement

Wordpress Social Share Plugin powered by Ultimatelysocial