ರಾಜ ಕಾರಣಕ್ಕಾಗಿ ಕೆಲವರನ್ನು ತುಷ್ಟಿಕರಣ ಮಾಡಲು ಆರೆಸ್ಸೆಸ್ಸನ್ನು ದೂಷಿಸುವುದು ಕೆಲವು ರಾಜಕಾರಣಿಗಳ ಚಾಳಿಯಾಗಿದೆ. ಈಗ ಉಪಚುನಾವಣೆಗಳು ಹತ್ತಿರವಿರು ವುದರಿಂದ ಕುಮಾರಸ್ವಾಮಿಯವರಿಗೂ ಈ ಚಾಳಿ ಕಾಡುತ್ತಿರಬಹುದು ಎಂದು ಸಚಿವ ಸಿ.ಸಿ.ಪಾಟೀಲ್ ಟೀಕಿಸಿದ್ದಾರೆ.ಆರ್ಎಸ್ಎಸ್ ಕೋಟ್ಯಂತರ ಜನರಿಗೆ ದೇಶ ಸೇವೆಯ ಬಗ್ಗೆ ಮತ್ತು ಆಪತ್ತಿನ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಸೇವೆ ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಪಾಠ ಹೇಳಿಕೊಟ್ಟಿದೆಯೇ ವಿನಹ, ಎಂದಿಗೂ ವಂಶಪಾರಂಪರ್ಯ ಅಥವಾ ಕುಟುಂಬ ರಾಜಕಾರಣವನ್ನು ಬೋಸಿಲ್ಲ.ಈ ಸಂಘಟನೆಯಲ್ಲಿ ಕೆಲಸ ಮಾಡುತ್ತಿರುವ ಇನ್ನೂ ಎಷ್ಟೋ ಮಂದಿ ಯಾವುದೇ ಚುನಾವಣಾ ರಾಜಕೀಯಕ್ಕೆ ಆಗಲಿ ಅಥವಾ ಅಕಾರಕ್ಕಾಗಲೀ ಗಂಟು ಬಿದ್ದಿಲ್ಲ ಎಂಬುದು ಕುಮಾರಸ್ವಾಮಿಯವರಿಗೆ ಅರ್ಥವಾಗಬೇಕಿತ್ತು. ಆರ್ಎಸ್ಎಸ್ನ ಸೇವಾ ಮನೋ ಭಾವವನ್ನು ಹಿಂದೆ ದೇವೇಗೌಡರೇ ಸ್ವತಹ ಮನಃ ಪೂರ್ತಿಯಾಗಿ ಪ್ರಶಂಸಿಸಿದ್ದರು ಎಂಬುದನ್ನು ನೆನಪು ಮಾಡಿಕೊಂಡರೆ ಸಾಕು ಎಂದು ಲೇವಡಿ ಮಾಡಿದ್ದಾರೆ.