ಬೀದರ್ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮುಖಕ್ಕೆ ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ತುಂಬಾ ಅವಶ್ಯಕತೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಹೇಳಿದ್ದಾರೆ.ಬೀದರ್ನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಕೇಸುಗಳು ಹೆಚ್ಚಾಗುತ್ತಲೇ ಇವೆ, ಜನರು ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುಬೇಕು.ಅದೇ ರೀತಿ ತಮ್ಮ ಕೈಗಳನ್ನು ಸ್ಯಾನಿಟೈಜರ್ ಇಲ್ಲದಿದ್ದರೂ ಕನಿಷ್ಠ ಸೋಪಿನಿಂದ ಕಾಲ ಕಾಲಕ್ಕೆ ಕೈ ತೊಳೆದುಕೊಳ್ಳುವ ರೂಡಿ ಮಾಡಿಕೊಳ್ಳಿ. ಸರಕಾರದ ಕಾನೂನಿನ ಪ್ರಕಾರ ಯಾರು ಮಾಸ್ಕ್ ಧರಿಸುವುದಿಲ್ಲವೋ ಅಂತವರಿಗೆ ೨೦೦ ರೂಪಾಯಿ. ಮತ್ತು ಗ್ರಾಮೀಣ ಪ್ರದೇಶದಲ್ಲಿ ೧೦೦ ರೂ. ಅಂತೆ ದಂಡವನ್ನು ನಿಗತಿಪಡಿಸಲಾಗಿರುವ ವಿಷಯ ತಮ್ಮೆಲ್ಲರಿಗೂ ತಿಳಿದಿದೆ. ದಯಮಾಡಿ ಯಾರು ಕೂಡ ಕಾನೂನಿನ ಕ್ರಮಕ್ಕೆ ಅವಕಾಶ ಮಾಡಿಕೊಡದೆ ಎಲ್ಲರೂ ಕಟ್ಟುನಿಟ್ಟಾದ ಕ್ರಮವನ್ನು ಅನುಸರಿಸಿ ಎಂದು ಹೇಳಿದರು.
ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ-ಜಿಲ್ಲಾಧಿಕಾರಿ ರಾಮಚಂದ್ರನ್.ಆರ್
Please follow and like us: