ಅರಸೀಕೆರೆ ತಾಲೂಕಿನ ಬಾಣವರ ಅಗ್ರಹಾರ ಬಡಾವಣೆ ಲಾಕ್ ಡೌನ್ ಆಗಿರುವ ಹಿನ್ನೆಲೆ ಬಿಜೆಪಿ ವತಿಯಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದರು. ಬಾಣಾವರ ನಗರದ ಅಗ್ರಹಾರ ಬಡಾವಣೆಯಲ್ಲಿ ವಾಸವಾಗಿದ್ದ ವ್ಯಕ್ತಿಗೆ ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಬಿಜೆಪಿ ಬೆಂಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮರಿಸ್ವಾಮಿ ಭೇಟಿ ನೀಡಿ ಸ್ಥಳೀಯರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡುವುದರ ಮೂಲಕ ನಿಮ್ಮೊಂದಿಗೆ ನಾವಿದ್ದೀವಿ ಎನ್ನುವ ಭರವಸೆಯನ್ನು ನೀಡಿದರು. ಇನ್ನು ಈ ಸಂದರ್ಭದಲ್ಲಿ ಚೀನಾ ವಸ್ತುಗಳನ್ನು ನಿಷೇಧ ಮಾಡುವಂತೆ ಕರಪತ್ರವನ್ನು ಹಂಚುವುದರ ಮೂಲಕ ಮೇಡ್ ಇನ್ ಇಂಡಿಯಾ ವಸ್ತುಗಳನ್ನು ಬಳಸಿ ಚೀನಾ ವಸ್ತುಗಳನ್ನು ನಿಷೇಧಿಸಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕಿರಣ್ ಕೆ.ವಿ.ಎನ್ ಶಿವು ,ವಿಜಯಕುಮಾರ್, ಬಾಣವಾರ ಶಿವಕುಮಾರ್, ಮತ್ತಿತರರು ಉಪಸ್ಥಿತರಿದ್ದರು.