ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಅರಸೀಕೆರೆ ತಾಲೂಕಿನ ಬಾಣವರ ಅಗ್ರಹಾರ ಬಡಾವಣೆ  ಲಾಕ್ ಡೌನ್ ಆಗಿರುವ ಹಿನ್ನೆಲೆ ಬಿಜೆಪಿ ವತಿಯಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್  ವಿತರಿಸಿದರು. ಬಾಣಾವರ ನಗರದ  ಅಗ್ರಹಾರ ಬಡಾವಣೆಯಲ್ಲಿ ವಾಸವಾಗಿದ್ದ ವ್ಯಕ್ತಿಗೆ ಕೊರೊನ ಸೋಂಕಿನ ಹಿನ್ನೆಲೆಯಲ್ಲಿ  ಬಿಜೆಪಿ ಬೆಂಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮರಿಸ್ವಾಮಿ ಭೇಟಿ ನೀಡಿ ಸ್ಥಳೀಯರಿಗೆ  ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡುವುದರ ಮೂಲಕ ನಿಮ್ಮೊಂದಿಗೆ ನಾವಿದ್ದೀವಿ  ಎನ್ನುವ ಭರವಸೆಯನ್ನು ನೀಡಿದರು. ಇನ್ನು ಈ ಸಂದರ್ಭದಲ್ಲಿ ಚೀನಾ ವಸ್ತುಗಳನ್ನು  ನಿಷೇಧ ಮಾಡುವಂತೆ ಕರಪತ್ರವನ್ನು  ಹಂಚುವುದರ  ಮೂಲಕ ಮೇಡ್ ಇನ್ ಇಂಡಿಯಾ ವಸ್ತುಗಳನ್ನು ಬಳಸಿ ಚೀನಾ ವಸ್ತುಗಳನ್ನು ನಿಷೇಧಿಸಿ ಎಂದು  ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕಿರಣ್ ಕೆ.ವಿ.ಎನ್ ಶಿವು ,ವಿಜಯಕುಮಾರ್, ಬಾಣವಾರ  ಶಿವಕುಮಾರ್,  ಮತ್ತಿತರರು ಉಪಸ್ಥಿತರಿದ್ದರು.

 

 

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಕದಲ್ಲಿ ಮತ್ತೆ ಲಾಕ್‌ಡೌನ್..?

Tue Jun 23 , 2020
ರಾಜ್ಯದಲ್ಲಿ ಕೊರೊನಾ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ರಾಜ್ಯವನ್ನು ಮತ್ತೊಮ್ಮೆ ಲಾಕ್‌ಡೌನ್ ಮಾಡಬೇಕೆಂಬ ಸಲಹೆಗಳು ಕೇಳಿ ಬಂದಿವೆ. ಸಿಎಂ ಯಡಿಯೂರಪ್ಪ ಅವರ ಜತೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಈಗಾಗಲೇ ಈ ಕುರಿತು ಚರ್ಚೆಗಳು  ಆರಂಭಗೊಂಡಿದ್ದು, ಬೆಂಗಳೂರಿನ ಕೆಲವು ಕ್ಷೇತ್ರಗಳಲ್ಲಿ ಲಾಕ್‌ಡವನ್ ನಿಯಮಾವಳಿಗಳನ್ನು ಬಿಗಿಗೊಳಿಸಲಾಗಿದೆ. ರಾಜ್ಯಾದ್ಯಂತ […]

Advertisement

Wordpress Social Share Plugin powered by Ultimatelysocial