ಮುಂದಿನ ವಿಧಾನಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್ ಎರಡು ಹೋಳಾಗಲಿದೆ;ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ

 ಮುಂದಿನ ವಿಧಾನಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಸಿಂಧಗಿ ವಿಧಾನಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಈಶ್ವರಪ್ಪ ಸಚಿವ  ಕೆ ಸ್‌ ಈಶ್ವರಪ್ಪ  ಈವರೆಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ನಾನು ಸಿಎಂ ನಾನು ಸಿಎಂ ಎನ್ನುತ್ತಿದ್ದರು. ಒಬ್ಬರು ಎಡಕ್ಕೆ ಎಳೆದರೆ, ಇನ್ನೊಬ್ಬರು ಬಲಕ್ಕೆ ಎಳೆಯುತ್ತಾರೆ. ಇದೀಗ ಅನಿವಾರ್ಯವಾಗಿ ಒಂದಾಗಿದ್ದಾರೆ ಎಂದು ವ್ಯಂಗ್ಯ ಮಾಡಿದರು. ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಾನಗಲ್, ಸಿಂಧಗಿ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಜನ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ನಮಗಿದೆ.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ಯಡಿಯೂರಪ್ಪ ಸಹ ಎರಡು ದಿನ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು. ಸಿಂಧಗಿ ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿ ರಮೇಶ ಭೂಸನೂರ ಅವರು ಸಚಿವರಾದ ವಿ.ಸೋಮಣ್ಣ, ಶಶಿಕಲಾ ಜೊಲ್ಲೆ, ಭೈರತಿ ಬಸವರಾಜ್, ಸಿ.ಸಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಸೇರಿದಂತೆ ವಿವಿಧ ನಾಯಕರೊಂದಿಗೆ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

Please follow and like us:

Leave a Reply

Your email address will not be published. Required fields are marked *

Next Post

"ಸಲಗ" ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಎಂಟ್ರಿ ಕೊಡಲಿದ್ದಾರೆ ಈ ಐವರು ದಿಗ್ಗಜರು..!

Fri Oct 8 , 2021
ಮೊದಲ ಬಾರಿಗೆ ನಟ ದುನಿಯಾ ವಿಜಯ್ ನಿರ್ದೇಶನ ಮಾಡಿ ಅಭಿನಯಿಸಿರುವ ಸಲಗ ಸಿನಿಮಾ ಬಿಡುಗಡೆಗೆ ಸಿದ್ಧತೆ ಈಗಾಗಲೇ  ಜೋರಾಗಿ ನಡೆಯುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನ ಅದ್ಧೂರಿ ಕಾರ್ಯಕ್ರಮ ಆಯೋಜಿಸಿರುವ ಚಿತ್ರತಂಡ, ಅದಕ್ಕಾಗಿ ಅತಿಥಿಗಳ ಆಯ್ಕೆಯನ್ನು ಅಂತಿಮಗೊಳಿಸಿದೆ. ಅಕ್ಟೋಬರ್ 14 ರಂದು ಸಲಗ ಸಿನಿಮಾ ಬೆಳ್ಳಿ ಪರದೆ ಮೇಲೆ ಮೊದಲ ಪ್ರದರ್ಶನ ಕಾಣಲಿದೆ. ಅಕ್ಟೋಬರ್ 10 ರಂದು ಚಿತ್ರತಂಡದಿಂದ ಪ್ರಿ–ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಘಟಾನುಘಟಿ ನಾಯಕರು ಭಾಗವಹಿಸುತ್ತಿದ್ದಾರೆ ಮಾಜಿ […]

Advertisement

Wordpress Social Share Plugin powered by Ultimatelysocial