ಮುಖ್ಯ ಆಯುಕ್ತರು ರವರಿಂದ ವಿವಿಧ ಕಾಮಗಾರಿ ಪ್ರಗತಿ ಪರಿಶೀಲನೆ

ದೊಮ್ಮಲೂರು ಮೇಲುಸೇತುವೆ(ಈಜೀಪುರದ ಕಡೆ ಹೋಗುವ ರಸ್ತೆ) ಹತ್ತಿರ ಮಳೆ ನೀರು ಹರಿದು ಹೋಗುವ 3 ಕ್ರಾಸ್ ಕಲ್ವರ್ಟ್ ಗಳು ರಸ್ತೆ ಕೆಳಗೆ ಹಾದು ಹೋಗಿದ್ದು, ಅವುಗಳಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸಿ ರೀಮಾಡೆಲಿಂಗ್ ಮಾಡಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯ ದೊಮ್ಮಲೂರು ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ದೊಮ್ಮಲೂರು ಮೇಲುಸೇತುವೆ ಹತ್ತಿರ ಈಜೀಪುರ ಕಡೆಗೆ ಹೋಗುವ ಮಧ್ಯಂತರ ವರ್ತುಲ ರಸ್ತೆಯಲ್ಲಿ ಕ್ರಾಸ್ ಕಲ್ವರ್ಟ್ ಗಳನ್ನು ದುರಸ್ತಿ ಪಡಿಸದೇ ಇರುವ ಕಾರಣ ಮಳೆ ಬಂದ ಸಮಸಯದಲ್ಲಿ ರಸ್ತೆ ಮೇಲೆ ನೀರು ನಿಂತು ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಸಂಬಂಧ 3 ಕ್ರಾಸ್ ಕಲ್ವರ್ಟ್ಸ್ ಗಳನ್ನು ರೀಮಾಡೆಲಿಂಗ್ ಮಾಡಿ ರಸ್ತೆ ಮೇಲೆ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥಿತವಾಗಿ ಕೆಲಸ ಮಾಡಲು ಬೃಹತ್ ನೀರುಗಾಲುವೆ ವಿಭಾಗದ ಮುಖ್ಯ ಅಭಿಯಂತರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತದನಂತರ, ದೊಮ್ಮಲೂರು ನಿಂದ ಈಜೀಪುರ ಜಂಕ್ಷನ್ ವರೆಗಿನ 2.15 ಕಿ.ಮೀ ಉದ್ದದ ರಸ್ತೆಯಲ್ಲಿ 23.41 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಸದ್ಯ ವೈಟ್ ಟಾಪಿಂಗ್ ಕಾಮಗಾರಿಯು ಶೇ. 60 ರಷ್ಟು ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೇಳೆ ಯೋಜನಾ ವಿಭಾಗದ ಮುಖ್ಯ ಅಭಿಯಂತರರಾದ ಲೋಕೇಶ್ ರವರು ಪ್ರತಿಕ್ರಿಯಿಸಿ, ದೊಮ್ಮಲೂರು ನಿಂದ ಈಜೀಪುರ ಜಂಕ್ಷನ್ ವರೆಗೆ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಜೂನ್ ತಿಂಗಳಲ್ಲಿ ಕೈಗೆತ್ತಿಕೊಂಡಿದ್ದು, ವಾಹನ ಸಂಚಾರದ ನಡುವೆಯೇ ದ್ವಿಮುಖ ರಸ್ತೆಗಳ ಅರ್ಧದಷ್ಟು ಭಾಗದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಸುತ್ತಿದ್ದು, ಇನ್ನುಳಿದರ್ಧ ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ದೊಮ್ಮಲೂರು ಮೇಲುಸೇತುವೆ ಬಳಿ ಮಳೆ ನೀರು ಹರಿಯುವ ಕ್ರಾಸ್ ಕಲ್ವರ್ಟ್ ಗಳ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಮುಗಿದ ಬಳಿಕ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಇದೇ ವೇಳೆ ದೊಮ್ಮಲೂರು ವಾರ್ಡ್ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ವ್ಯವಸ್ಥಿತ ರೀತಿಯಲ್ಲಿ ಮುಚ್ಚುವ ಕಾರ್ಯವನ್ನು ಶೀಘ್ರವಾಗಿ ಮುಗಿಸಲು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರಿಶೀಲನೆ ವೇಳೆ ಬೃಹತ್ ನೀರುಗಾಲುವೆ ವಿಭಾಗದ ಮುಖ್ಯ ಅಭಿಯಂತರರಾದ ಸುಗುಣ, ಯೋಜನಾ ವಿಭಾಗದ ಮುಖ್ಯ ಅಭಿಯಂತರರಾದ ಎಂ.ಲೋಕೇಶ್, ಕಾರ್ಯಪಾಲಕ ಅಭಿಯಂತರರಾದ ಹೇಮಲತಾ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಅಕ್ಟೋಬರ್ 16 ರಂದು ಕಾಂಗ್ರೆಸ್ ಕಾರ್ಯಕಾರಿ ಸಭೆ ;ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ

Sat Oct 9 , 2021
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಕ್ಟೋಬರ್ 16 ರಂದು ನಡೆಯಲಿದೆ. ಲಖಿಂಪುರ್ ಖೇರಿ ಹಿಂಸಾಚಾರ ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆ ಮಹತ್ವ ಪಡೆದಿದೆ. ಈ ಹಿಂದೆ ಜಿ 23 ನಾಯಕರ ಬೇಡಿಕೆಯಂತೆ ಪಕ್ಷದ ಅತ್ಯುನ್ನತ ಕಾರ್ಯಕಾರಿ ಮಂಡಳಿಯು ತನ್ನ ಪಂಜಾಬ್ ಘಟಕದಲ್ಲಿನ ರಾಜಕೀಯ ಪ್ರಕ್ಷುಬ್ಧತೆಗೆ ಸಂಬಂಧಿಸಿದ ಕೆಲವು ಪ್ರಶ್ನೆಗಳನ್ನು ಪರಿಹರಿಸುವ ಸಾಧ್ಯತೆಯಿದೆ.ಪಕ್ಷದ ಕಾರ್ಯಕರ್ತರ ಪ್ರಕಾರ ಸಭೆ ಭೌತಿಕವಾಗಿ ನಡೆಯಲಿದೆ.covid ಕಾರಣದಿಂದಾಗಿ ಕಳೆದ 18 ತಿಂಗಳುಗಳಿಂದ, CWC […]

Advertisement

Wordpress Social Share Plugin powered by Ultimatelysocial