ಮೃತ ಮಕ್ಕಳ ಕುಟುಂಬಕ್ಕೆ ೫ ಲಕ್ಷ ರೂ. ಪರಿಹಾರ

ಮಂಗಳೂರು ಗುರುಪುರದಲ್ಲಿ ನಿನ್ನೆ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದ ಇಬ್ಬರು ಮಕ್ಕಳ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಈ ಬಗ್ಗೆ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪರಿಹಾರ ಮೊತ್ತವನ್ನು ಮೃತಪಟ್ಟ ಕುಟುಂಬಕ್ಕೆ ವಿತರಿಸಿದರು. ಘಟನೆಯಲ್ಲಿ ನಾಲ್ಕು ಮನೆಗಳಿಗೆ ಹಾನಿಯಾಗಿತ್ತು ಮತ್ತು 16 ವರ್ಷದ ಸಫ್ವಾನ್ ಮತ್ತು 10 ವರ್ಷದ ಸಹಲಾ ಮೃತಪಟ್ಟಿದ್ದರು. ಸುಮಾರು ಐದು ಗಂಟೆಗಳ ಕಾರ್ಯಾಚರಣೆ ನಂತರ ಅಗ್ನಿಶಾಮಕದಳ ಮತ್ತು ಎನ್ ಡಿ ಆರ್ ಎಫ್ ಪಡೆ ಮಣ್ಣಿನಡಿಯಿಂದ ಇಬ್ಬರು ಮಕ್ಕಳ ಮೃತದೇಹವನ್ನು ಹೊರತೆಗೆದಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ದೇಶಾದ್ಯಂತ ಕೊರೊನಾ ಅಟ್ಟಹಾಸ

Mon Jul 6 , 2020
ದೇಶಾದ್ಯಂತ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದೇಶದಲ್ಲಿ ಒಂದು ದಿನದಲ್ಲಿ 24,248 ಮಂದಿಗೆ ಮಾರಕ ಸೋಂಕು ಪತ್ತೆಯಾಗಿದೆ, ಕಳೆದ 24 ಗಂಟೆಯಲ್ಲಿ  425 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಮಹಾಮಾರಿ ಸೋಂಕಿಗೆ 19,693 ಸಾವನ್ನಪ್ಪಿದ್ದಾರೆ. ಇದೀಗ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,97,413ಕ್ಕೆ ಏರಿಕೆಯಾಗಿದೆ. ಈ ಪೈಕಿ 4,24,433 ಮಂದಿ ಸೋಂಕಿತರು ಸಂಪೂರ್ಣವಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 2,53,287 ಮಂದಿ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

Advertisement

Wordpress Social Share Plugin powered by Ultimatelysocial