ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ಶೇಕರಣಾ ಜಲಾಶಯ ಯೋಜನೆ ಜೀವಂತವಾಗಿದ್ದು, ಕಾರ್ಯಗತಗೊಳಿಸಲು ಬದ್ಧವಾಗಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯಗಳ ಕೆಳಭಾಗದಲ್ಲಿ ನೀರನ್ನು ಸಂಗ್ರಹಿಸಲು ಯಾವುದೇ ಆಣೆಕಟ್ಟು ಇಲ್ಲ. ಈ ಹಿನ್ನಲೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಶೇಖರಣಾ ಜಲಾಶಯವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ನಾವು ತಮಿಳುನಾಡು ರಾಜ್ಯಕ್ಕೆ ಮಾಸಿಕವಾಗಿ ನಿಗದಿಪಡಿಸಿದ ವಾರ್ಷಿಕ ನೀರಿನ ಪ್ರಮಾಣ ೪೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲು ಹಾಗೂ ಬೆಂಗಳೂರು ನಗರಕ್ಕೆ ೪.೭೫ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮೇಕೆದಾಟು ಜಲಾಶಯ ನಿರ್ಮಾಣ ಜೀವಂತ
Please follow and like us: